ಆ್ಯಪ್ನಗರ

ಕೆಪಿಎಲ್ ಅಭಿಮಾನಿಗಳಿಗೆ ಮತ್ತೆ ನಿರಾಸೆ; ಮೈಸೂರು-ಬೆಳಗಾವಿ ಕದನದಲ್ಲಿ ಮಳೆಯದ್ದೇ ಸಿಕ್ಸರ್-ಫೋರ್!

ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ನಡೆಯಬೇಕಾಗಿದ್ದ ಮೈಸೂರು ವಾರಿಯರ್ಸ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದರಿಂದಾಗಿ ಇತ್ತಂಡಗಳಿಗೂ ತಲಾ ಒಂದು ಅಂಕವನ್ನು ಹಂಚಲಾಗಿದೆ.

Vijaya Karnataka Web 19 Aug 2019, 10:34 pm
ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ಎಂಟನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರೋಚಕ ಕದನವನ್ನು ನಿರೀಕ್ಷಿಸುತ್ತಿದ್ದ ಕ್ರೀಡಾಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ.
Vijaya Karnataka Web rain


ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈಸೂರು ವಾರಿಯರ್ಸ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ನಡುವೆ ನಿಗದಿಯಾಗಿದ್ದ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದರಿಂದಾಗಿ ಇತ್ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿದೆ.

ಒಟ್ಟಾರೆಯಾಗಿ ಟೂರ್ನಿಯಲ್ಲಿ ಮೂರನೇ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಇದು ಟೂರ್ನಿಯ ರೋಚಕತೆಗೂ ಧಕ್ಕೆಯನ್ನುಂಟು ಮಾಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಮೈಸೂರು ಮಳೆಯಿಂದಾಗಿ ಪಂದ್ಯ ನಿಲುಗಡೆಗೊಂಡಾಗ 11 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿ ಸುಸ್ಥಿತಿಯಲ್ಲಿತ್ತು. ಈ ಸಂದರ್ಭದಲ್ಲಿ ಸುರಿದ ಸತತ ಮಳೆಯಿಂದಾಗಿ ಪಂದ್ಯ ಮುಂದುವರಿಸಲಾಗಲಿಲ್ಲ. ಅಂತಿಮವಾಗಿ ಪಂದ್ಯ ಕೈಬಿಡಲು ಅಂಪೈರ್‌ಗಳು ನಿರ್ಧರಿಸಿದರು.

ಮೈಸೂರಿಗೆ ದೇಗಾ ನಿಶ್ಚಲ್ (4) ಬೇಗನೇ ನಷ್ಟವಾದರೂ ಮಗದೊಮ್ಮೆ ಮಿಂಚಿದ ಕೃಷ್ಣಮೂರ್ತಿ ಸಿದ್ದಾರ್ತ್ ಕೇವಲ 32 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ ಅಜೇಯ 49 ರನ್ ಗಳಿಸಿ ಕ್ರೀಸಿನಲ್ಲಿದ್ದರು. ಇವರಿಗೆ ತಕ್ಕ ಸಾಥ್ ನೀಡಿದ ನಾಯಕ ಅಮಿತ್ ವರ್ಮಾ 23 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದ್ದರು.

ಒಟ್ಟಾರೆಯಾಗಿ ಮೈಸೂರಿಗೆ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳು ಮಳೆಯಿಂದಾಗಿ ನಷ್ಟಗೊಂಡಿದೆ. ಮಗದೊಂದು ಪಂದ್ಯದಲ್ಲಿ ಸೋಲಿನ ಫಲಿತಾಂಶವನ್ನು ಕಂಡಿದೆ. ಅತ್ತ ಬೆಳಗಾವಿ ಪ್ಯಾಂಥರ್ಸ್ ಸಹ ಮೊದಲ ಪಂದ್ಯದಲ್ಲಿ ಸೋತಿದ್ದರೆ ಈಗಿನ ಎರಡನೇ ಪಂದ್ಯದಲ್ಲಿ ಡ್ರಾ ಫಲಿತಾಂಶಕ್ಕೆ ತೃಪ್ತಿಪಡಬೇಕಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌