ಆ್ಯಪ್ನಗರ

ಪಾಕ್ ವಿರುದ್ಧ ಆಡಬೇಕೋ ಬೇಡವೇ? ಸರಕಾರವೇ ನಿರ್ಧರಿಸಲಿ: ಕಪಿಲ್

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಬೇಕೋ ಬೇಡವೋ ಎಂಬುದನ್ನು ಸರಕಾರವೇ ನಿರ್ಧರಿಸಲಿದೆ ಎಂದು ಭಾರತದ ಚೊಚ್ಚಲ ವಿಶ್ವಕಪ್ ವಿಜೇತ ಮಾಜಿ ನಾಯಕ ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 23 Feb 2019, 10:53 am
ಹೊಸದಿಲ್ಲಿ: ಪುಲ್ವಾಮಾ ಉಗ್ರರ ದಾಳಿಯ ಹಿನ್ನಲೆಯಲ್ಲಿ ಪಾಕಿಸ್ತಾನ ವಿರುದ್ಧ ಐಸಿಸಿ ಏಕದಿನ ವಿಶ್ವಕಪ್ ಪಂದ್ಯವನ್ನು ಕೈಬಿಡುವಂತೆ ವ್ಯಾಪಕ ಜನಾಗ್ರಹ ಕೇಳಿಬಂದಿದೆ.
Vijaya Karnataka Web ind-vs-pak


ಶುಕ್ರವಾರದಂದು ಸಭೆ ಸೇರಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಡಳಿತಾತ್ಮಕ ಸಮಿತಿಯು ಅಂತಿಮ ನಿರ್ಧಾರವನ್ನು ಸರಕಾರವೇ ನಿರ್ಧರಿಸಲಿ ಎಂದು ಹೇಳಿದೆ. ಈಗ ಚೊಚ್ಚಲ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಹ ಅದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಆಡಬೇಕೋ ಬೇಡವೋ ಎಂಬುದನ್ನು ನಾವು ಜನರು ನಿರ್ಧರಿಸುವಂತಿಲ್ಲ. ಇದನ್ನು ಸರಕಾರವೇ ನಿರ್ಧರಿಸಲಿ. ಇದರ ಬಗ್ಗೆ ಹೇಳಿಕೆ ನೀಡದೇ ಸರಕಾರ ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ವಿಚೇಚನೆಗೆ ಬಿಟ್ಟುಕೊಡುವುದು ಒಳ್ಳೆಯದು. ದೇಶದ ಹಿತಾಸಕ್ತಿ ಆಧಾರದಲ್ಲೇ ಅವರು ಉತ್ತಮ ತೀರ್ಮಾನ ಕೈಗೊಳ್ಳಲಿದ್ದಾರೆ. ಆ ನಿರ್ಧಾರವನ್ನು ನಾವು ಪಾಲಿಸಬೇಕು ಎಂದು ಹೇಳಿದರು.

ಈ ಮುನ್ನ ಮಾಜಿ ದಿಗ್ಗಜರಾದ ಸುನಿಲ್ ಗವಾಸ್ಕರ್ ಹಾಗೂ ಸಚಿನ್ ತೆಂಡೂಲ್ಕರ್ ಸಹ ಪಾಕಿಸ್ತಾನಕ್ಕೆ ಎರಡು ಅಂಕಗಳನ್ನು ಬಿಟ್ಟುಕೊಡಬಾರದು. ಹಾಗಾಗಿ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಆಡಿ ಗೆಲ್ಲಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅತ್ತ ಸೌರವ್ ಗಂಗೂಲಿ, ಹರ್ಭಜನ್ ಸಿಂಗ್ ಮುಂತಾದವರು ವಿಶ್ವಕಪ್‌ನಿಂದ ಹಿಂಜರಿಯುವಂತೆ ಮನವಿ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌