ಆ್ಯಪ್ನಗರ

ಮನೀಶ್‌ ಪಡೆಗೆ ಸತತ 2ನೇ ಗೆಲುವು

ರೋಹನ್‌ ಕದಮ್‌ ಮತ್ತು ಮಯಾಂಕ್‌ ಅಗರ್ವಾಲ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಜತೆಗೆ ವಿ.ಕೌಶಿಕ್‌ ಅವರ ಶಿಸ್ತಿನ ಬೌಲಿಂಗ್‌ ನೆರವಿನಿಂದ ಕರ್ನಾಟಕ ತಂಡ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಕ್ರಿಕೆಟ್‌ ಟೂರ್ನಿಯ ಸೂಪರ್‌ ಲೀಗ್‌ ಹಂತದ ತನ್ನ 2ನೇ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ 10 ರನ್‌ಗಳ ಜಯ ದಾಖಲಿಸಿದೆ.

Agencies 10 Mar 2019, 5:00 am
ಇಂದೋರ್‌ : ರೋಹನ್‌ ಕದಮ್‌ ಮತ್ತು ಮಯಾಂಕ್‌ ಅಗರ್ವಾಲ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಜತೆಗೆ ವಿ.ಕೌಶಿಕ್‌ ಅವರ ಶಿಸ್ತಿನ ಬೌಲಿಂಗ್‌ ನೆರವಿನಿಂದ ಕರ್ನಾಟಕ ತಂಡ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಕ್ರಿಕೆಟ್‌ ಟೂರ್ನಿಯ ಸೂಪರ್‌ ಲೀಗ್‌ ಹಂತದ ತನ್ನ 2ನೇ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ 10 ರನ್‌ಗಳ ಜಯ ದಾಖಲಿಸಿದೆ.
Vijaya Karnataka Web manish team won against up
ಮನೀಶ್‌ ಪಡೆಗೆ ಸತತ 2ನೇ ಗೆಲುವು


ಇಲ್ಲಿನ ಹೋಳ್ಕರ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸೂಪರ್‌ ಲೀಗ್‌ ಹಂತದ 'ಬಿ' ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಮನೀಶ್‌ ಪಡೆ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 149 ರನ್‌ ಕಲೆಹಾಕಿತು. ನಂತರ ಗುರಿ ಬೆನ್ನತ್ತಿದ ಉತ್ತರ ಪ್ರದೇಶ ತಂಡವನ್ನು 139 ರನ್‌ಗಳಿಗೆ ಕಟ್ಟಿ ಹಾಕಿ, ಸತತ 2ನೇ ಜಯ ದಾಖಲಿಸಿತು.
ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ: 149/6 (ರೋಹನ್‌ ಕದಮ್‌ 35, ಮಯಾಂಕ್‌ ಅಗರ್ವಾಲ್‌ 33)
ಉತ್ತರ ಪ್ರದೇಶ: 20 ಓವರ್‌ಗಳಲ್ಲಿ 139/8 (ಉಪೇಂದ್ರ ಯಾದವ್‌ 42, ಅಕ್ಷದೀಪ್‌ ನಾಥ್‌ 46; ಕೌಶಿಕ್‌ 22ಕ್ಕೆ 3, ಸುಚಿತ್‌ 19ಕ್ಕೆ 2).

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌