ಆ್ಯಪ್ನಗರ

ಬ್ಯಾಟಿಂಗ್ ಜೊತೆಗೆ ಬೌಲಿಂಗ್ ಮೇಲೆಯೂ ಗಮನ ಕೇಂದ್ರಿಕರಿಸಿದ ಮಯಾಂಕ್

ಆಯ್ಕೆ ಬಗ್ಗೆ ಚಿಂತಿಸದೆ ಬ್ಯಾಟಿಂಗ್-ಬೌಲಿಂಗ್ ಬಗ್ಗೆ ಗಮನ ಕೇಂದ್ರಿಕರಿಸಿರುವ ಮಯಾಂಕ್

Vijaya Karnataka Web 31 Oct 2018, 11:09 am
ಬೆಂಗಳೂರು: ದೇಶಿ ಕ್ರಿಕೆಟ್‌ನಲ್ಲಿ ನಿರಂತರ ಸ್ಥಿರ ಪ್ರದರ್ಶನದ ಬಳಿಕವೂ ಕೊನೆಗೂ ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಟೆಸ್ಟ್ ತಂಡಕ್ಕೆ ಕರ್ನಾಟಕದ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಿತ್ತು. ಆದರೂ ಆಡುವ ಅವಕಾಶವನ್ನು ಗಿಟ್ಟಿಸಿಕೊಂಡಿರಲಿಲ್ಲ.
Vijaya Karnataka Web mayank-agarwal-02


ಇದೀಗ ಮತ್ತೆ ಆಸ್ಟ್ರೇಲಿಯಾ ವಿರುದ್ಧದ ಭಾರತ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. 18 ಸದಸ್ಯರ ಬೃಹತ್ ಬಳಗವನ್ನು ಪ್ರಕಟಿಸಿದರೂ ಆಯ್ಕೆ ಸಮಿತಿಯು ಮಯಾಂಕ್‌ಗೆ ಮಣೆ ಹಾಕಲಿಲ್ಲ.

ಇಲ್ಲಿ ಗಮನಾರ್ಹ ಅಂಶವೆಂದರೆ ಐದು ದಿನಗಳ ಪ್ರಕಾರ ಕ್ರಿಕೆಟ್‌ನಲ್ಲಿ ಸತತ ವೈಫಲ್ಯದ ಹೊರತಾಗಿಯೂ ರೋಹಿತ್ ಶರ್ಮಾ ಅವರಿಗೆ ಬುಲಾವ್ ನೀಡಲಾಗಿದೆ. ಆದರೆ ದೇಸಿ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನದ ಹೊರತಾಗಿಯೂ ಮಯಾಂಕ್ ಅವರನ್ನು ಕೈಬಿಡಲಾಗಿದೆ.

ಆಯ್ಕೆ ಸಮಿತಿ ಈ ನಿರ್ಧಾರದ ವಿರುದ್ಧ ಮಯಾಂಕ್ ಸಾರ್ವಜನಿಕವಾಗಿ ಧ್ವನಿಯೆತ್ತದೆ ಮೌನಿಯಾಗಿರಲು ನಿರ್ಧರಿಸಿದ್ದಾರೆ. ಇದರ ಬದಲು ಸಿಕ್ಕ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸುವ ನಿರ್ಧಾರ ಕೈಗೊಂಡಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಗಳನ್ನು ಎದುರಿಸಲು ಮಯಾಂಕ್ ಅವರಿಗೆ ಗುರು ರಾಹುಲ್ ದ್ರಾವಿಡ್ ಮಾರ್ಗದರ್ಶನವೇ ಸ್ಫೂರ್ತಿಯಾಗಿದೆ.

ಸದ್ಯ ಭಾರತೀಯ ಕ್ರಿಕೆಟ್ ತಂಡವು ಬ್ಯಾಟ್ಸ್‌ಮನ್ ಆಲ್‌ರೌಂಡರ್ ಕೊರತೆಯನ್ನು ಎದುರಿಸುತ್ತಿದೆ. ಹಿಂದೆ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವೀರೇಂದ್ರ ಸೆಹ್ವಾಗ್ ಅರೆಕಾಲಿಕ ಬೌಲಿಂಗ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು.

ಆದರೆ ಈಗ ಅಂತಹ ಆಟಗಾರರ ಕೊರತೆಯನ್ನು ಎದುರಿಸುತ್ತಿದೆ ಎಂಬುದನ್ನು ನಾಯಕ ವಿರಾಟ್ ಕೊಹ್ಲಿ ಅವಲೋಕನ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಯಾಂಕ್, ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲೂ ಗಮನ ಕೇಂದ್ರಿಕರಿಸಿದ್ದಾರೆ. ಅಲ್ಲದೆ ದೈನಂದಿನ ಕನಿಷ್ಠ 45 ನಿಮಿಷಗಳಷ್ಟು ಆಫ್ ಸ್ಪಿನ್ನಿಂಗ್ ದಾಳಿಯನ್ನು ಅಭ್ಯಾಸಿಸಲು ನಿರ್ಧರಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೊದಲ ನಾಲ್ಕು ದಿನಗಳ ಪಂದ್ಯಕ್ಕಾಗಿನ ಭಾರತ ಎ ತಂಡಕ್ಕೆ 27ರ ಹರೆಯದ ಮಯಾಂಕ್ ಆಯ್ಕೆಯಾಗಿದ್ದಾರೆ. ಪ್ರತಿ ಪಂದ್ಯದಂತೆ ಇಲ್ಲೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಅತ್ಯುತ್ತಮ ನಿರ್ವಹಣೆ ನೀಡುವುದರತ್ತ ಗಮನ ಕೇಂದ್ರಿಕರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌