ಆ್ಯಪ್ನಗರ

ಹುಟ್ಟೂರು ರಾಂಚಿಗೆ ಬಂದಿಳಿದ ಧೋನಿ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ರಾಂಚಿ ಆತಿಥ್ಯ ವಹಿಸುತ್ತಿದೆ. ಇದರಂತೆ ಲೋಕಲ್ ಹೀರೊ ಮಹೇಂದ್ರ ಸಿಂಗ್ ಧೋನಿ ತಮ್ಮ ಹುಟ್ಟೂರಿಗೆ ತಲುಪಿದ್ದಾರೆ.

Vijaya Karnataka Web 6 Mar 2019, 3:50 pm
ರಾಂಚಿ: ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯಕ್ಕೆ ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂ ಕಾಂಪ್ಲೆಕ್ಸ್ ಆತಿಥ್ಯ ವಹಿಸುತ್ತಿದೆ.
Vijaya Karnataka Web ms-dhoni-01


ಇದರಂತೆ ಟೀಮ್ ಇಂಡಿಯಾ ರಾಂಚಿ ನಗರವನ್ನು ತಲುಪಿದೆ. ಅತ್ತ ಸ್ಥಳೀಯ ಹೀರೊ ಮಹೇಂದ್ರ ಸಿಂಗ್ ಧೋನಿ ಹುಟ್ಟೂರು ಪ್ರವೇಶಿಸಿದ್ದಾರೆ.

ರಾಂಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಧೋನಿಯನ್ನು ಅಭಿಮಾನಿಗಳು ಬರಮಾಡಿಕೊಂಡರು.

ಐದು ಪಂದ್ಯಗಳ ಏಕದಿನ ಸರಣಿಯನ್ನು ಗೆಲ್ಲಲು ಭಾರತಕ್ಕಿನ್ನು ಕೇವಲ ಒಂದು ಗೆಲುವಿನ ಅಗತ್ಯವಿದೆ. ರಾಂಚಿಯಲ್ಲಿ ನಡೆಯಲಿರುವ ಪಂದ್ಯದಲ್ಲೇ ಭಾರತ ಸರಣಿ ಗೆಲುವನ್ನು ಗುರಿಯಾಗಿಸಿದೆ.

ರಾಂಚಿಯಲ್ಲಿ ಧೋನಿ ಅತ್ಯುತ್ತಮ ಫಾರ್ಮ್ ಕಾಪಾಡಿಕೊಂಡಿದ್ದಾರೆ. ಅಲ್ಲದೆ ಪಿಚ್ ಬಗ್ಗೆ ಸ್ಪಷ್ಟ ಮಾಹಿತಿ ಇರುವ ಹಿನ್ನಲೆಯಲ್ಲಿ ಭಾರತಕ್ಕೆ ಗೆಲುವು ದಾಖಲಿಸಲು ಮತ್ತಷ್ಟು ನೆರವಾಗಲಿದೆ.

ಭಾರತ ಹಾಗೂ ಆಸೀಸ್ ನಡುವಣ ಮೂರನೇ ಕದನ ಶುಕ್ರವಾರದಂದು ಅಹರ್ನಿಶಿಯಾಗಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿದ ಭಾರತ ದ್ವಿತೀಯ ಪಂದ್ಯದಲ್ಲಿ ಎಂಟು ರನ್ ಅಂತರದ ರೋಚಕ ಗೆಲುವು ದಾಖಲಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌