ಆ್ಯಪ್ನಗರ

ಎಂಎಸ್ ಧೋನಿ ನಿವೃತ್ತಿ ಸಲ್ಲಿಸಬೇಕೇ? ಮಾಜಿ ಕಪ್ತಾನ ಸೌರವ್ ಗಂಗೂಲಿ ಏನಂತಾರೆ?

ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯಬೇಕೇ ಅಥವಾ ನಿವೃತ್ತಿ ಸಲ್ಲಿಸಬೇಕೇ ಎಂಬುದಕ್ಕೆ ಸಂಬಂಧಿಸಿದಂತೆ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಮತವನ್ನು ಹಂಚಿಕೊಂಡಿದ್ದಾರೆ.

Vijaya Karnataka Web 25 Aug 2019, 4:12 pm
ಹೊಸದಿಲ್ಲಿ: ಏಕದಿನ ವಿಶ್ವಕಪ್ ಬೆನ್ನಲ್ಲೇ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಲಿದ್ದಾರೆ ಎಂಬ ಬಗ್ಗೆ ವರದಿಗಳು ಬಂದಿದ್ದವು.
Vijaya Karnataka Web ms-dhoni-05


ಇವೆಲ್ಲದರ ನಡುವೆ ಎರಡು ತಿಂಗಳುಗಳ ವಿರಾಮ ಪಡೆದಿರುವ ಮಹೇಂದ್ರ ಸಿಂಗ್ ಧೋನಿ, ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದರು.

ಇದೀಗ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವರೇ ಅಥವಾ ನಿವೃತ್ತಿ ಸಲ್ಲಿಸಲಿದ್ದಾರೆಯೇ ಎಂಬುದು ಸಾಕಷ್ಟು ಚರ್ಚೆಗೀಡಾಗಿದೆ. ಈ ಬಗ್ಗೆ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಮತವನ್ನು ಹಂಚಿಕೊಂಡಿದ್ದಾರೆ.

ನಿಜ ಹೇಳಬೇಕೆಂದರೆ, ನನಗೆ ಗೊತ್ತಿಲ್ಲ. ಇದು ತಂಡದ ಮ್ಯಾನೇಜ್‌ಮೆಂಟ್ ಯೋಚಿಸುವ ರೀತಿಯಲ್ಲಿ ಅವಲಂಬಿಸಿರುತ್ತದೆ. ನಿಸ್ಸಂಶವಾಗಿಯೂ, ಧೋನಿ ಇನ್ನು ಯುವಕನಲ್ಲ. ಹಾಗಾಗಿ ಪ್ರತಿಯೊಬ್ಬರ ಜೀವನದಲ್ಲೂ ಒಂದು ಅಥವಾ ಇನ್ನೊಂದು ಹಂತದಲ್ಲಿ ಇಂತಹ ನಿರ್ಧಾರವು ಬರುತ್ತದೆ. ಆದ್ದರಿಂದ ಪರಿಸ್ಥಿತಿ ಎಲ್ಲಿಗೆ ಹೋಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವೆಲ್ಲರೂ ಇನ್ನೂ ಮೂರು ಅಥವಾ ನಾಲ್ಕು ತಿಂಗಳುಗಳ ಕಾಲ ಕಾಯಬೇಕು ಎಂದು ದಾದಾ ಖ್ಯಾತಿಯ ಗಂಗೂಲಿ ತಿಳಿಸಿದರು.

ನಿಸ್ಸಂಶಯವಾಗಿಯೂ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಉತ್ತಮವಾಗಿ ಆಡುತ್ತಿದ್ದಾರೆ. ಆದರೆ ಅಂತಿಮವಾಗಿ ಆಯ್ಕೆಗಾರರ ಮನೋಸ್ಥಿತಿ ಹಾಗೂ ಅವರು ಏನು ಯೋಚಿಸುತ್ತಾರೆ ಎಂಬುದನ್ನು ಅವಲಂಬಿಸಿರುತ್ತದೆ. ಅವರು ಭವಿಷ್ಯವನ್ನು ನೋಡಲು ಬಯಸುತ್ತಾರೆಯೇ? ಇವೆಲ್ಲವನ್ನು ಸಮಯವೇ ಹೇಳಲಿದೆ ಎಂದು ಗಂಗೂಲಿ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌