ಆ್ಯಪ್ನಗರ

ಧೋನಿ ಕಮ್‌ಬ್ಯಾಕ್ ಸನ್ನಿಹಿತವೇ? ಕಾಳಿ ದೇವಿಗೆ ಪೂಜೆ ಸಲ್ಲಿಸಿದ ರಾಂಚಿ ಬಾಯ್

ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್ ರಂಗದಿಂದ ದೂರವುಳಿದಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ನಿವೃತ್ತಿಗೂ ಮೊದಲು ಕೊನೆಯ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವರೇ ಎಂಬುದು ಬಹಳಷ್ಟು ಕುತೂಹಲವೆನಿಸಿದೆ.

Vijaya Karnataka Web 22 Jan 2020, 11:24 am
ರಾಂಚಿ: ತಮಗೆ ಕಷ್ಟದ ಪರಿಸ್ಥಿತಿ ಎದುರಾದಾಗ ಮಹೇಂದ್ರ ಸಿಂಗ್ ಧೋನಿ ಕಾಳಿ ದೇವಿಯ ದರ್ಶನವನ್ನು ಪಡೆಯುತ್ತಾರೆ. ಭಾರತೀಯ ಕ್ರಿಕೆಟ್ ರಂಗದಿಂದ ಸುದೀರ್ಘ ಸಮಯದಿಂದ ಹೊರಗುಳಿದಿರುವ ಮಹಿ, ಇದೀಗ ಕಾಳಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.
Vijaya Karnataka Web ಮಹೇಂದ್ರ ಸಿಂಗ್ ಧೋನಿ


ಜಾರ್ಖಂಡ್‌ನಲ್ಲಿರುವ ದಿಯೋರಿ ಮಂದಿರಕ್ಕೆ ಭೇಟಿ ನೀಡಿರುವ ಧೋನಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದರಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವರೇ ಎಂಬುದು ಬಹಳಷ್ಟು ಕುತೂಹಲವೆನಿಸಿದೆ.

2019 ಏಕದಿನ ವಿಶ್ವಕಪ್‌ನಲ್ಲಿ ಧೋನಿ ಕೊನೆಯ ಬಾರಿ ಆಡಿದ್ದರು. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ ಭಾರತ ಟೂರ್ನಿಯಿಂದಲೇ ಹೊರನಡೆದಿತ್ತು. ಅಮೋಘ ಇನ್ನಿಂಗ್ಸ್ ಕಟ್ಟಿದ ಧೋನಿ ಅರ್ಧಶತಕ ಬಾರಿಸಿ ಗೆಲುವಿನ ನಿರೀಕ್ಷೆ ಮೂಡಿಸಿದರೂ ರನೌಟ್ ಬಲೆಗೆ ಸಿಲುಕುವ ಮೂಲಕ ನಿರಾಸೆ ಅನುಭವಿಸಿದ್ದರು.

ಧೋನಿ ನಿವೃತ್ತಿ ಸಲ್ಲಿಸಲು ಇದೇ ಸಕಾಲ; 5 ಪ್ರಬಲ ಕಾರಣಗಳು ಇಲ್ಲಿವೆ

ಇಲ್ಲಿದೆ ಧೋನಿ ವೃತ್ತಿ ಜೀವನ ಮುಕ್ತಾಯವಾಗಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ ಯುವ ಆಟಗಾರರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರಿಕೆಟ್ ರಂಗದಿಂದ ದೂರವುಳಿದಿದ್ದರು. ಇದೀಗ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡುವರೇ ಎಂಬುದು ಕುತೂಹಲವೆನಿಸಿದೆ.

ಈ ನಿಟ್ಟಿನಲ್ಲಿ 2020 ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯು ಧೋನಿ ಪಾಲಿಗೆ ನಿರ್ಣಾಯಕವೆನಿಸಲಿದೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿರುವ ಧೋನಿ, ಉತ್ತಮ ಫಾರ್ಮ್ ಕಾಪಾಡಿಕೊಂಡರೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪುನರಾಗಮನವನ್ನು ನಿರೀಕ್ಷೆ ಮಾಡಬಹುದಾಗಿದೆ.

ಧೋನಿ ನಾಯಕತ್ವದಲ್ಲಿ ಬ್ಯಾಟ್ಸ್‌ಮನ್‌ಗಳ ಕ್ರಮಾಂಕದ ಬಗ್ಗೆ ಸ್ಪಷ್ಟತೆಯಿತ್ತು: ಸೆಹ್ವಾಗ್

38ರ ಹರೆಯದ ಧೋನಿ ಈ ಹಿಂದೆಯೂ ದಿಯೋರಿ ಮಂದಿರಕ್ಕೆ ಭೇಟಿ ಕಾಳಿ ದೇವಿಯ ದರ್ಶನವನ್ನು ಪಡೆದಿದ್ದಾರೆ. ಐಪಿಎಲ್ 13ನೇ ಆವೃತ್ತಿಗೆ ಕಾಲಿಡುತ್ತಿರುವಂತೆಯೇ ಈ ಬಾರಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿರುವುದು ಗಮನಾರ್ಹವೆನಿಸುತ್ತದೆ. ಇನ್ನೊಂದೆಡೆ ಏಕದಿನ ಕ್ರಿಕೆಟ್‌ಗೂ ಧೋನಿ ಪುನರಾಗಮನ ಮಾಡುವುದು ಕ್ಷೀಣವೆನಿಸಿದೆ. ಆದರೆ ಟಿ20 ವಿಶ್ವಕಪ್ ಗುರಿಯಾಗಿರಿಸಿ ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಇರಾದೆಯಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌