ಮುಂಬಯಿ, ಸೆಪ್ಟೆಂಬರ್ 12: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರವಾರ ತಮ್ಮ ಅಧಿಕೃತ ಟ್ವಿಟರ್ ಖಾತೆ ಮೂಲಕ ಧೋನಿ ಜೊತೆಗಿನ ಫೋಟೊ ಪ್ರಕಟಿಸಿ ನೆಪಿನಾಳ ಕೆದಕಿದ್ದು, ನೆಟ್ಟಿಗರಲ್ಲಿ ಧೋನಿ ನಿವೃತ್ತಿಯ ಹುಳ ಹೊಕ್ಕುವಂತೆ ಮಾಡಿತ್ತು.
2016 ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಗೆದ್ದ ಸವಿನೆಪಿನ ಫೋಟೊ ಒಂದನ್ನು ಪ್ರಕಟಿಸಿದ್ದ ಕೊಹ್ಲಿ, ಆ ಪಂದ್ಯವನ್ನು ಮರೆಯುವುದು ಅಸಾಧ್ಯ, ಧೋನಿ ನನ್ನ ಫಿಟ್ನೆಸ್ ಪರೀಕ್ಷೆ ನಡೆಸುತ್ತಿದ್ದಂತೆ ಓಡಿಸಿದ್ದರು ಎಂದು ಟ್ವಿಟರ್ ಗೋಡೆಯ ಮೇಲೆ ಬರೆದಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ಕೆ.ಎಲ್ ರಾಹುಲ್ಗೆ ಕೊಕ್!
ಕೂಡಲೇ ಸೋಷಿಯಲ್ ಮೀಡಿಯಾಗಳಲ್ಲಿ ಧೋನಿ ನಿವೃತ್ತಿಯ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿತ್ತು. ಧೋನಿ ಗುರುವಾರ ಸಂಜೆ 7 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ನಿವೃತ್ತಿ ಪ್ರಕಟಿಸಲಿದ್ದಾರೆಂಬ ವದಂತಿ ಎಲ್ಲಡೆ ಮಿಂಚಿನಂತೆ ಹಬ್ಬಿತ್ತು.
ಆದರೆ ಈ ಎಲ್ಲಾ ವದಂತಿಗಳಿಗೆ ಟೀಮ್ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯ ಕೋಚ್ ಎಂಎಸ್ಕೆ ಪ್ರಸಾದ್ ತೆರೆ ಎಳೆದಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸಾದ್, ಧೋನಿ ನಿವೃತ್ತಿ ವಿಚಾರ ಕೇವಲ ವದಂತಿಯಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. "ಖಂಡಿತಾ ಧೋನಿ ನಿವೃತ್ತಿ ಹೊಂದುತ್ತಿಲ್ಲ. ಇಂಥದ್ದೊಂದು ಸುದ್ದಿ ಕೇಳಿ ಆಶ್ಚರ್ಯವಾಗುತ್ತಿದೆ," ಎಂದು ಪ್ರಸಾದ್ ಹೇಳಿದ್ದಾರೆ.
ಧೋನಿಯಿಂದ ಫಿಟ್ನೆಸ್ ಪರೀಕ್ಷೆಗೆ ಒಳಪಟ್ಟ ಪಂದ್ಯವನ್ನು ನೆನೆದ ಕಿಂಗ್ ಕೊಹ್ಲಿ!
ಇದೇ ವೇಳೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ ಅವರ ಕೈಬಿಡಲಾಗಿದ್ದು, ಯುವ ಪ್ರತಿಭೆ ಶುಭಮನ್ ಗಿಲ್ಗೆ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ ಸೀಮಿತ ಓವರ್ಗಳಲ್ಲಿ ಭಾರತದ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ, ಹರಿಣಗಳ ವಿರುದ್ಧ ಸರಣಿಯಲ್ಲಿ ಟೆಸ್ಟ್ಗೆ ಆರಂಭಿಕನಾಗಿ ಆಡುವ ಅವಕಾಶ ಮಾಡಿಕೊಡಲಾಗುತ್ತಿದೆ.
ಶಕಿಬ್ ಅಲ್ ಹಸನ್ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ!
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಶುಭಮನ್ ಗಿಲ್.
2016 ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಗೆದ್ದ ಸವಿನೆಪಿನ ಫೋಟೊ ಒಂದನ್ನು ಪ್ರಕಟಿಸಿದ್ದ ಕೊಹ್ಲಿ, ಆ ಪಂದ್ಯವನ್ನು ಮರೆಯುವುದು ಅಸಾಧ್ಯ, ಧೋನಿ ನನ್ನ ಫಿಟ್ನೆಸ್ ಪರೀಕ್ಷೆ ನಡೆಸುತ್ತಿದ್ದಂತೆ ಓಡಿಸಿದ್ದರು ಎಂದು ಟ್ವಿಟರ್ ಗೋಡೆಯ ಮೇಲೆ ಬರೆದಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ಕೆ.ಎಲ್ ರಾಹುಲ್ಗೆ ಕೊಕ್!
ಕೂಡಲೇ ಸೋಷಿಯಲ್ ಮೀಡಿಯಾಗಳಲ್ಲಿ ಧೋನಿ ನಿವೃತ್ತಿಯ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿತ್ತು. ಧೋನಿ ಗುರುವಾರ ಸಂಜೆ 7 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ನಿವೃತ್ತಿ ಪ್ರಕಟಿಸಲಿದ್ದಾರೆಂಬ ವದಂತಿ ಎಲ್ಲಡೆ ಮಿಂಚಿನಂತೆ ಹಬ್ಬಿತ್ತು.
ಆದರೆ ಈ ಎಲ್ಲಾ ವದಂತಿಗಳಿಗೆ ಟೀಮ್ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯ ಕೋಚ್ ಎಂಎಸ್ಕೆ ಪ್ರಸಾದ್ ತೆರೆ ಎಳೆದಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸಾದ್, ಧೋನಿ ನಿವೃತ್ತಿ ವಿಚಾರ ಕೇವಲ ವದಂತಿಯಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. "ಖಂಡಿತಾ ಧೋನಿ ನಿವೃತ್ತಿ ಹೊಂದುತ್ತಿಲ್ಲ. ಇಂಥದ್ದೊಂದು ಸುದ್ದಿ ಕೇಳಿ ಆಶ್ಚರ್ಯವಾಗುತ್ತಿದೆ," ಎಂದು ಪ್ರಸಾದ್ ಹೇಳಿದ್ದಾರೆ.
ಧೋನಿಯಿಂದ ಫಿಟ್ನೆಸ್ ಪರೀಕ್ಷೆಗೆ ಒಳಪಟ್ಟ ಪಂದ್ಯವನ್ನು ನೆನೆದ ಕಿಂಗ್ ಕೊಹ್ಲಿ!
ಇದೇ ವೇಳೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ ಅವರ ಕೈಬಿಡಲಾಗಿದ್ದು, ಯುವ ಪ್ರತಿಭೆ ಶುಭಮನ್ ಗಿಲ್ಗೆ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ ಸೀಮಿತ ಓವರ್ಗಳಲ್ಲಿ ಭಾರತದ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ, ಹರಿಣಗಳ ವಿರುದ್ಧ ಸರಣಿಯಲ್ಲಿ ಟೆಸ್ಟ್ಗೆ ಆರಂಭಿಕನಾಗಿ ಆಡುವ ಅವಕಾಶ ಮಾಡಿಕೊಡಲಾಗುತ್ತಿದೆ.
ಶಕಿಬ್ ಅಲ್ ಹಸನ್ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ!
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಶುಭಮನ್ ಗಿಲ್.