ಆ್ಯಪ್ನಗರ

ಲಂಕಾದಲ್ಲಿ ಯಶಸ್ಸನ್ನು ಹುಡುಕುತ್ತಾ ಯುವ ತಂಡ

ಯುವ ಆಟಗಾರರನ್ನು ಒಳಗೊಂಡಿರುವ ಟೀಮ್ ಇಂಡಿಯಾ, ಶ್ರೀಲಂಕಾದಲ್ಲಿ ಸಾಗಲಿರುವ ಟ್ವೆಂಟಿ-20 ತ್ರಿಕೋನ ಸರಣಿಗಾಗಿ ದ್ವೀಪ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದೆ.

TIMESOFINDIA.COM 4 Mar 2018, 9:19 pm
ಕೊಲಂಬೊ: ಯುವ ಆಟಗಾರರನ್ನು ಒಳಗೊಂಡಿರುವ ಟೀಮ್ ಇಂಡಿಯಾ, ಶ್ರೀಲಂಕಾದಲ್ಲಿ ಸಾಗಲಿರುವ ಟ್ವೆಂಟಿ-20 ತ್ರಿಕೋನ ಸರಣಿಗಾಗಿ ದ್ವೀಪ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದೆ.
Vijaya Karnataka Web new look india target t20 success in sri lanka tri series
ಲಂಕಾದಲ್ಲಿ ಯಶಸ್ಸನ್ನು ಹುಡುಕುತ್ತಾ ಯುವ ತಂಡ


ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ವಿರಾಟ್ ಕೊಹ್ಲಿ ಜತೆಗೆ ಮಹೇಂದ್ರ ಸಿಂಗ್ ಧೋನಿ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಕುಲ್‌ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿಯನ್ನು ಸೂಚಿಸಲಾಗಿದೆ.

ಇದರೊಂದಿಗೆ ಯುವ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಮೆರೆಯಲು ಉತ್ತಮ ಅವಕಾಶ ದೊರಕಲಿದೆ.

ಆಗಲೇ ಟ್ವೆಂಟಿ-20 ಕ್ರಿಕೆಟ್‌ಗೆ ಕಾಲಿಟ್ಟಿರುವ ಉದಯೋನ್ಮುಖ ವಿಕಿಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಜತೆಗೆ 23ರ ಹರೆಯದ ಬಲಗೈ ವೇಗಿ ಮೊಹಮ್ಮದ್ ಸಿರಾಜ್ ತಂಡಕ್ಕೆ ಪುನರಾಮವನ್ನು ಮಾಡಿಕೊಂಡಿದ್ದಾರೆ.

20ರ ಹರೆಯದ ಪಂತ್ ಇತ್ತೀಚೆಗಷ್ಟೇ ದೇಶೀಯ ಟ್ವೆಂಟಿ-20 ಟೂರ್ನಿಯಲ್ಲಿ 32 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು. ಇದು ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಎರಡನೇ ಅತಿ ವೇಗದ ಶತಕವೆನಿಸಿದೆ.

ಅತ್ತ ಪ್ರಮುಖ ವೇಗಿಗಳ ಅನುಪಸ್ಥಿತಿಯಲ್ಲಿ 26ರ ಹರೆಯದ ಎಡಗೈ ವೇಗಿ ಜೈದೇವ್ ಉನಾದ್ಕಟ್ ತಂಡದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾರೆ. ಇವರಿಗೆ ಶಾರ್ದೂಲ್ ಠಾಕೂರ್ ಸಹ ಸಾಥ್ ನೀಡಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಯಜುವೇಂದ್ರ ಚಹಲ್ ಜತೆಗೆ ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಅನುಭವಿ ರೋಹಿತ್ ಶರ್ಮಾ, ಶಿಖರ್ ಧವನ್ ಜತೆಗೆ ಸುರೇಶ್ ರೈನಾ, ಕೆಎಲ್ ರಾಹುಲ್, ಮನೀಷ್ ಪಾಂಡೆ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಆಸರೆಯಾಗಲಿದ್ದಾರೆ. ಇವರ ಜತೆಗೆ ದೀಪಕ್ ಹೂಡಾ, ವಿಜಯ್ ಶಂಕರ್ ಸಹ ಅವಕಾಶಕ್ಕಾಗಿ ಹಾತೊರೆಯಲಿದ್ದಾರೆ.

ಭಾರತ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್ (ಉಪನಾಯಕ), ಕೆಎಲ್ ರಾಹುಲ್, ಸುರೇಶ್ ರೈನಾ, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ವಿಜಯ್ ಶಂಕರ್, ಶಾರ್ದೂಲ್ ಠಾಕೂರ್, ಜೈದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್ ಮತ್ತು ರಿಷಭ್ ಪಂತ್ (ವಿಕೆಟ್ ಕೀಪರ್).

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌