ಆ್ಯಪ್ನಗರ

ಸವಾಲುಗಳನ್ನು ಇಷ್ಟಪಡುತ್ತೇನೆ: ಶಾರ್ದೂಲ್

ಶ್ರೀಲಂಕಾ ವಿರುದ್ಧ ನಿಧಹಸ್ ತ್ರಿಕೋನ ಟಿ-20 ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ಬಲಗೈ ವೇಗಿ ಶಾರ್ದೂಲ್ ಠಾಕೂರ್ ನಿರ್ಣಾಯಕ ಪಾತ್ರ ವಹಿಸಿದ್ದರು.

TIMESOFINDIA.COM 13 Mar 2018, 3:51 pm
ಕೊಲಂಬೊ: ಶ್ರೀಲಂಕಾ ವಿರುದ್ಧ ನಿಧಹಸ್ ತ್ರಿಕೋನ ಟಿ-20 ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ಬಲಗೈ ವೇಗಿ ಶಾರ್ದೂಲ್ ಠಾಕೂರ್ ನಿರ್ಣಾಯಕ ಪಾತ್ರ ವಹಿಸಿದ್ದರು.
Vijaya Karnataka Web nidahas trophy 2018 shardul ready to step up in bhuvneshwar bumrahs absence
ಸವಾಲುಗಳನ್ನು ಇಷ್ಟಪಡುತ್ತೇನೆ: ಶಾರ್ದೂಲ್


ಇದರೊಂದಿಗೆ ಭಾರತದ ಫೈನಲ್ ಸಾಧ್ಯತೆ ಹೆಚ್ಚಾಗಿದೆ. 27 ರನ್ ತೆತ್ತು ಶಾರ್ದೂಲ್ ನಾಲ್ಕು ವಿಕೆಟುಗಳನ್ನು ಕಬಳಿಸಿದ್ದರು. ಹಾಗೆಯೇ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿದ್ದರು.

ಇದರೊಂದಿಗೆ ಅನುಭವಿ ಭುವನೇಶ್ವರ್ ಕುಮಾರ್ ಹಾಗೂ ಜಸ್ಪ್ರೀತ್ ಬುಮ್ರಾ ಅಲಭ್ಯತೆಯಲ್ಲಿ ತಮಗೆ ಲಭಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.

ಸರಣಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 27 ರನ್ ಬಿಟ್ಟುಕೊಟ್ಟಿದ್ದ ಶಾರ್ದೂಲ್ ಬಹುಬೇಗನೇ ತಮ್ಮ ತಪ್ಪುಗಳನ್ನು ಅರಿತುಕೊಂಡು ತಿರುಗಿ ಬಿದ್ದಿದ್ದಾರೆ.

ಹೊಸ ಸವಾಲುಗಳನ್ನು ಸ್ವೀಕರಿಸಲು ನಾನು ಇಷ್ಟ ಪಡುತ್ತೇನೆ. ಹಿರಿಯ ಬೌಲರ್‌ಗಳ ಅಲಭ್ಯತೆಯಲ್ಲಿ ನಾನು ಹೆಚ್ಚಿನ ಜವಾಬ್ದಾರಿ ವಹಿಸಬೇಕಿದೆ ಎಂದರು.

ಈ ಹಿಂದಿಯೂ ಇಂತಹ ಜವಾಬ್ದಾರಿ ನಿರ್ವಹಿಸಿದ್ದೇನೆ. ರಣಜಿ ಟ್ರೋಫಿಯಲ್ಲಿ ಮುಂಬಯಿ ಪರ ಜಹೀರ್ ಖಾನ್, ಧವಳ್ ಕುಲಕರ್ಣಿ ಹಾಗೂ ಅಜಿತ್ ಅಗರ್‌ಕರ್ ಅಲಭ್ಯತೆಯಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಹಿರಿಯರಿಗೆ ವಿಶ್ರಾಂತಿ ನೀಡಿದಾಗ ವೇಗದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಎಂದರು.

ಅದೇ ಹೊತ್ತಿಗೆ ಬೌಲಿಂಗ್‌ನಲ್ಲಿ ವೈವಿಧ್ಯತೆಯನ್ನು ತರಲು ಪರಿಶ್ರಮ ಪಡುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌