ಆ್ಯಪ್ನಗರ

ಭಜ್ಜಿಗಿಲ್ಲ ಖೇಲ್ ರತ್ನ; ಪಂಜಾಬ್ ಸರಕಾರ ತನಿಖೆಗೆ ಆದೇಶ

ರಾಜೀವ್ ಗಾಂಧಿ ಶೇಲ್ ರತ್ನ ಪ್ರಶಸ್ತಿಗಾಗಿ ಅರ್ಜಿಯನ್ನು ಸಲ್ಲಿಸಲು ವಿಳಂಬವಾಗಿರುವ ಪರಿಣಾಮ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಪ್ರಸಕ್ತ ಸಾಲಿನ ದೇಶದ ಅತ್ಯುನ್ನತ್ತ ಕ್ರೀಡಾ ಪ್ರಶಸ್ತಿಯಿಂದ ವಂಚಿತವಾಗಿದ್ದಾರೆ.

Vijaya Karnataka Web 1 Aug 2019, 4:55 pm
ಹೊಸದಿಲ್ಲಿ: ಅರ್ಜಿ ಸಲ್ಲಿಸಲು ವಿಳಂಬವಾಗಿರುವ ಹಿನ್ನಲೆಯಲ್ಲಿ ಈ ಬಾರಿಯ ದೇಶದ ಅತ್ಯುನ್ನತ್ತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯಿಂದ ಹರ್ಭಜನ್ ಸಿಂಗ್ ವಂಚಿತವಾಗಿದ್ದಾರೆ.
Vijaya Karnataka Web harbhajan-singh-01


ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಕೇಂದ್ರ ಕ್ರೀಡಾ ಸಚಿವಾಲಯಕ್ಕೆ ಹರ್ಭಜನ್ ಸಿಂಗ್ ಹೆಸರನ್ನು ಶಿಫಾರಸು ಮಾಡಲು ಪಂಜಾಬ್ ಸರಕಾರ ನಿರ್ಧರಿಸಿತ್ತು. ಇದರಂತೆ ಮಾರ್ಚ್ ತಿಂಗಳಲ್ಲೇ ಹರ್ಭಜನ್ ಅರ್ಜಿ ಸಲ್ಲಿಸಿದ್ದರು.

ಆದರೆ ಕೇಂದ್ರ ಸರಕಾರಕ್ಕೆ ವಿಳಂಬವಾಗಿ ತಲುಪಿದ್ದರಿಂದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇದರ ವಿರುದ್ಧ ಭಜ್ಜಿ ಬೇಸರ ತೋಡಿಕೊಂಡಿದ್ದು, ತನಿಖೆ ನಡೆಸುವಂತೆ ಪಂಜಾಬ್ ಕ್ರೀಡಾ ಸಚಿವರನ್ನು ವಿನಂತಿಸಿಕೊಂಡಿದ್ದಾರೆ.

ಹರ್ಭಜನ್ ವಿನಂತಿಗೆ ಸ್ಪಂದಿಸಿರುವ ಪಂಜಾಬ್ ಕ್ರೀಡಾ ಸಚಿವರಾದ ರಾಣಾ ಗುರ್ಮಿತ್ ಸಿಂಗ್ ಸೋಧಿ ಈ ಎಲ್ಲ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಯಾವುದೇ ಕ್ರೀಡಾಪಟುವಿಗೆ ಪ್ರಶಸ್ತಿ ಅತಿ ದೊಡ್ಡ ಸ್ಫೂರ್ತಿಯಾಗಿರುತ್ತದೆ. ಆದರೆ ಇಂತಹ ಘಟನೆಗಳು ಕ್ರೀಡಾಪಟುಗಳನ್ನು ನಿರುತ್ಸಾಹಗೊಳಿಸುತ್ತದೆ ಎಂದು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಮೂರನೇ ಅತಿ ಹೆಚ್ಚು ವಿಕೆಟುಗಳನ್ನು ಕಬಳಿಸಿರುವ 39ರ ಹರೆಯದ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌