ಆ್ಯಪ್ನಗರ

ರಾಜಸ್ಥಾನದಿಂದಲೂ ಪಾಕ್ ಕ್ರಿಕೆಟಿಗರ ಫೋಟೋಗಳು ತೆರವು

ಪುಲ್ವಾಮಾ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ರಾಜಸ್ಥಾನ ಕ್ರಿಕೆಟ್ ಸಂಸ್ಥೆ ಉಪಾಧ್ಯಕ್ಷ ಮೊಹಮ್ಮದ್ ಇಕ್ಬಾಲ್, ಪ್ರತಿಭಟನೆಯ ಭಾಗವಾಗಿ ಪಾಕಿಸ್ತಾನ ಮಾಜಿ ಕ್ರಿಕೆಟಿಗರ ಚಿತ್ರಗಳನ್ನು ತೆರವುಗೊಳಿಸಲಾಗಿದೆ ಎಂದಿದ್ದಾರೆ.

Vijaya Karnataka Web 19 Feb 2019, 11:02 am
ಹೊಸದಿಲ್ಲಿ: ಮುಂಬಯಿನ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಸಿಸಿಐ) ಬಳಿಕವೀಗ ರಾಜಸ್ಥಾನ ಕ್ರಿಕೆಟ್ ಸಂಸ್ಥೆ (ಆರ್‌ಸಿಬಿ) ಸಹ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸಲಾಗಿದೆ.
Vijaya Karnataka Web pak-cricketers


ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ 40 ಸಿಆರ್‌ಪಿಆಫ್ ಜವಾನರು ಹುತಾತ್ಮಗೊಂಡಿದ್ದರು. ಇದಾದ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ವ್ಯಕ್ತವಾಗಿತ್ತು.

ಪಾಕಿಸ್ತಾನ ವಿರುದ್ದ ಬಹಿರಂಗವಾಗಿಯೇ ಹೇಳಿಕೆ ನೀಡಿರುವ ಸಿಸಿಐ, ಇನ್ನು ಇಮ್ರಾನ್ ಖಾನ್ ಸೇರಿದಂತೆ ಪಾಕಿಸ್ತಾನ ಕ್ರಿಕೆಟಿಗರ ಭಾವಚಿತ್ರಗಳನ್ನು ತೆರವುಗೊಳಿಸಿತ್ತು.

ಇದಾದ ಬೆನ್ನಲ್ಲೇ ಪಂಜಾಬ್‌ನ ಮೊಹಾಲಿಯಿಂದಲೂ ಪಾಕ್ ಆಟಗಾರರ ಫೋಟೋಗಳಿಗೆ ಕತ್ತರಿ ಪ್ರಯೋಗ ಮಾಡಲಾಗಿದೆ.

ಇದಕ್ಕೊಂದು ಹೊಸ ಸೇರ್ಪಡೆಯೆಂಬಂತೆ ರಾಜಸ್ಥಾನ ಕ್ರಿಕೆಟ್ ಸಂಸ್ಥೆಯು ಪಾಕ್ ಆಟಗಾರರ ಫೋಟೋಗಳನ್ನು ತೆರವುಗೊಳಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ನಾವು ಹುತಾತ್ಮ ಯೋಧರ ಕುಟುಂಬದ ಜತೆಗಿದ್ದು, ಉಗ್ರರ ದಾಳಿಯನ್ನು ಖಂಡಿಸಿ ಪಾಕ್ ಆಟಗಾರರ ಚಿತ್ರಗಳನ್ನು ತೆರವುಗೊಳಿಸಲಾಗಿದೆ. ಭಾರತ ಇದೀಗ ಪ್ರತೀಕಾರ ತೀರಿಸುವ ಭರವಸೆ ನಮ್ಮಲ್ಲಿದೆ ಎಂದು ಆರ್‌ಸಿಎ ಉಪಾಧ್ಯಕ್ಷ ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌