ಆ್ಯಪ್ನಗರ

ವಿಶ್ವಕಪ್‌ಗೂ ಮುನ್ನ ಪಂತ್‌ಗೆ ಅಗ್ನಿ ಪರೀಕ್ಷೆ

ಮುಂಬರುವ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಉದಯೋನ್ಮುಖ ರಿಷಬ್ ಪಂತ್‌ಗೆ ನೈಜ ಪರೀಕ್ಷೆ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡಿದ್ದಲ್ಲಿ ವಿಶ್ವಕಪ್ ಟಿಕೆಟ್ ಪಡೆಯಲಿದ್ದಾರೆ.

Vijaya Karnataka Web 16 Feb 2019, 10:51 am
ಹೊಸದಿಲ್ಲಿ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಉದಯೋನ್ಮುಖ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಆಯ್ಕೆ ಮಾಡಲಾಗಿದೆ.
Vijaya Karnataka Web rishabh-pant


ಆದರೆ ಮುಂಬರುವ ಏಕದಿನ ವಿಶ್ವಕಪ್‌ಗೂ ಮುನ್ನ ಪಂತ್‌ಗೆ ನೈಜ ಅಗ್ನಿ ಪರೀಕ್ಷೆ ಎದುರಾಗಲಿದೆ.

ಹಿರಿಯ ಅನುಭವಿ ದಿನೇಶ್ ಕಾರ್ತಿಕ್‌ ಬದಲು ಪಂತ್ ಆಯ್ಕೆ ಮಾಡಲಾಗಿದೆ. ಇಲ್ಲಿ ಗಮನಾರ್ಹ ಅಂಶವೆಂದರೆ ಕಳೆದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಳಿಂದ ಪಂತ್ ಕೈಬಿಡಲಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಯ್ಕೆ ಸಮಿತಿಯು ವಿಶ್ವಕಪ್‌ಗೂ ಮುನ್ನ ಪಂತ್‌ಗೆ ಬೇಕಾದಷ್ಟು ಅವಕಾಶ ನೀಡಲಿದ್ದೇವೆ ಎಂದಿದ್ದಾರೆ. ತದಾ ಬಳಿಕವಷ್ಟೇ ವಿಶ್ವಕಪ್ ತಂಡವನ್ನು ಅಂತಿಮಗೊಳಿಸಲಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ ಮುಂಬರುವ ಏಕದಿನ ಸರಣಿಯಲ್ಲಿ ಪಂತ್ ಉತ್ತಮ ಪ್ರದರ್ಶನ ನೀಡಬೇಕಿದೆ. ಹಾಗಿದ್ದರೆ ಮಾತ್ರ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅತ್ತ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಕಡೆಗಣಿಸಿ ವಿಜಯ್ ಶಂಕರ್‌ಗೆ ಮಣೆ ಮಾಡಲಾಗಿದೆ. ಇದು ಕೂಡಾ ಹಾರ್ದಿಕ್ ಪಾಂಡ್ಯ ಬಳಿಕ ಶಂಕರ್ ಎರಡನೇ ಆಲ್‌ರೌಂಡರ್ ರೂಪದಲ್ಲಿ ಗುರುತಿಸಿಕೊಳ್ಳಲಿದ್ದಾರೆ ಎಂಬುದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌