ಆ್ಯಪ್ನಗರ

ಏಕದಿನ ತಂಡಕ್ಕೆ ರಿಷಭ್ ಪಂತ್ ಬುಲಾವ್ ಸಾಧ್ಯತೆ

ವಿಂಡೀಸ್ ಏಕದಿನ ಹಾಗೂ ಟಿ-10 ಸರಣಿಗೆ ಟೀಮ್ ಇಂಡಿಯಾ ಆಯ್ಕೆ ಇಂದು

TOI.in 11 Oct 2018, 10:30 am
ಮುಂಬಯಿ: ವೆಸ್ಟ್‌ಇಂಡೀಸ್ ವಿರುದ್ಧದ ಏಕದಿನ ಹಾಗೂ ಟ್ವೆಂಟಿ-20 ಸರಣಿಗಾಗಿನ ಟೀಮ್ ಇಂಡಿಯಾವನ್ನು ಬಿಸಿಸಿಐ ಆಯ್ಕೆ ಸಮಿತಿ ಗುರುವಾರದಂದು (ಇಂದು) ಘೋಷಿಸಲಿದೆ.
Vijaya Karnataka Web rishabh-pant


ಇದರಂತೆ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಉದಯೋನ್ಮುಖ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ತಂಡವನ್ನು ಸೇರಿಕೊಳ್ಳುವುದು ಬಹುತೇಕ ಖಚಿತವೆನಿಸಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಭಾವಿ ಇನ್ನಿಂಗ್ಸ್ ಕಟ್ಟಿರುವ ಪಂತ್, ಹಿರಿಯ ಅನುಭವಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರ ಜೊತೆ ಬೆಂಗಲಾವಲಾಗಿ ಗುರುತಿಸಿಕೊಳ್ಳಲಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ ಗುರಿಯಾಗಿರಿಸಿಕೊಂಡು ಸರಿಯಾದ ಸಂಯೋಜನೆಯ ತಂಡ ರಚಿಸುವುದು ಆಯ್ಕೆ ಸಮಿತಿಯ ಗುರಿಯಾಗಲಿದೆ. ಈ ನಿಟ್ಟಿನಲ್ಲಿ ಕೆಳ ಕ್ರಮಾಂಕದಲ್ಲಿ 20ರ ಹರೆಯದ ರಿಷಭ್ ಪಂತ್ ಅವರಂತಹ ಸ್ಫೋಟಕ ಬ್ಯಾಟ್ಸ್‌ಮನ್‌ಗಳ ಅಗತ್ಯವಿದೆ.

ಇನ್ನು ಧೋನಿ ತಂಡದಲ್ಲಿದ್ದರೂ ಓರ್ವ ಬ್ಯಾಟ್ಸ್‌ಮನ್ ರೂಪದಲ್ಲಿ ಪಂತ್‌ಗೆ ಅವಕಾಶ ನೀಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಪತ್ ಆಗಮನದೊಂದಿಗೆ 33ರ ಹರೆಯದ ದಿನೇಶ್ ಕಾರ್ತಿಕ್ ಅವಕಾಶವು ಕ್ಷೀಣಿಸಲಿದೆ.

ಮಾಜಿ ವಿಕೆಟ್ ಕೀಪರ್ ಎಂಎಸ್‌ಕೆ ಪ್ರಸಾದ್, ದೇವಾಂಗ್ ಗಾಂಧಿ, ಶರಣ್‌ದೀಪ್ ಸಿಂಗ್, ಜತಿನ್ ಪರಂಜಪೆ ಹಾಗೂ ಗಗನ್ ಖೋಡಾ ಸೇರಿದ ರಾಷ್ಟ್ರೀಯ ಆಯ್ಕೆ ಸಮಿತಿಯು ತಂಡವನ್ನು ಆರಿಸಲಿದೆ.

ಏಷ್ಯಾ ಕಪ್‌ನಿಂದ ಹೊರಗುಳಿದಿರುವ ನಾಯಕ ವಿರಾಟ್ ಕೊಹ್ಲಿ ತಂಡವನ್ನು ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೊದಲ ಮೂರು ಪಂದ್ಯಗಳ ಬಳಿಕ ವಿರಾಟ್ ವಿಶ್ರಾಂತಿಗೆ ನೀಡುವ ಸಾಧ್ಯತೆಯಿದೆ.

ಗಾಯಕ್ಕೆ ತುತ್ತಾಗಿರುವ ಕೇದರ್ ಜಾಧವ್ ಅಲಭ್ಯವಾಗಲಿದ್ದಾರೆ. ಅತ್ತ ಹಾರ್ದಿಕ್ ಪಾಂಡ್ಯ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

ಕರ್ನಾಟಕದ ಮನೀಷ್ ಪಾಂಡೆ ಅವಕಾಶ ಕ್ಷೀಣಿಸಿದೆ. ಆಲ್‌ರೌಂಡರ್ ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ. ಹಾಗೆಯೇ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಯುವ ವೇಗಿ ಖಲೀಲ್ ಅಹ್ಮದ್ ತಮ್ಮ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಅಂದ ಹಾಗೆ ಟೀಮ್ ಇಂಡಿಯಾ ಐದು ಪಂದ್ಯಗಳ ಏಕದಿನ ಹಾಗೂ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌