ಆ್ಯಪ್ನಗರ

ಅಂಪೈರ್ ನಿರ್ಧಾರ ಪ್ರಶ್ನಿಸಿದ ರೋಹಿತ್‌ಗೆ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಚಾಂಪಿಯನ್‌ಶಿಪ್‌ನಲ್ಲಿ ಭಾನುವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಅಂಪೈರ್ ನಿರ್ಧಾರಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ಏಜೆನ್ಸೀಸ್ 10 Apr 2017, 3:06 pm
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಚಾಂಪಿಯನ್‌ಶಿಪ್‌ನಲ್ಲಿ ಭಾನುವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಅಂಪೈರ್ ನಿರ್ಧಾರಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.
Vijaya Karnataka Web rohit sharma reprimanded by the match referee for showing dissent towards an umpiring decision
ಅಂಪೈರ್ ನಿರ್ಧಾರ ಪ್ರಶ್ನಿಸಿದ ರೋಹಿತ್‌ಗೆ ಎಚ್ಚರಿಕೆ


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮ್ಯಾಚ್ ರೆಫರಿ, ಮುಂಬೈ ನಾಯಕ ರೋಹಿತ್‌ಗೆ ವಾಗ್ದಂಡನೆಯನ್ನು ವಿಧಿಸಿದ್ದಾರೆ.

ಪಂದ್ಯದ ನಿರ್ಣಾಯಕ ಹಂತದಲ್ಲಿ ರೋಹಿತ್ ಶರ್ಮಾ ಅವರು ಎಲ್‌ಬಿಡಬ್ಲ್ಯು ಬಲೆಗೆ ಸಿಲುಕಿದರು. ನರೇನ್ ಎಸೆದ ಚೆಂಡು ಬ್ಯಾಟ್‌ಗೆ ಸವರಿ ಪ್ಯಾಡ್‌ಗೆ ತಗುಲಿದರೂ ಬೌಲರ್ ಮನವಿಯನ್ನು ಪುರಸ್ಕರಿಸಿದ ಅಂಪೈರ್ ಔಟ್ ನೀಡಿದ್ದರು.

ಈ ವೇಳೆಯಲ್ಲಿ ಕುಪಿತಗೊಂಡ ರೋಹಿತ್ ಅಂಪೈರ್ ನಿರ್ಧಾರದ ವಿರುದ್ಧ ತಮ್ಮ ಅಸಂತೃಪ್ತಿಯನ್ನು ತೋರಿದ್ದರು.

ಈಗ ಐಪಿಎಲ್ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಐಪಿಎಲ್ ನೀತಿ ಸಂಹಿತೆಯ 2.1.5 ರಲ್ಲಿ ಲೆವೆಲ್ 1 ಅಪರಾಧ ಮಾಡಿರುವುದಾಗಿ ಕಂಡುಬಂದಿದೆ.

ಕೊನೆಗೂ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಿತಿಶ್ ರಾಣಾ ಹಾಗೂ ಹಾರ್ದಿಕ್ ಪಾಂಡ್ಯ ಕೆಚ್ಚೆದೆಯ ಬ್ಯಾಟಿಂಗ್ ನೆರವಿನಿಂದ ಮುಂಬೈ ಗೆಲುವು ದಾಖಲಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌