ಆ್ಯಪ್ನಗರ

5 ವಿಕೆಟ್ ಕಿತ್ತು ಮಿಂಚಿದ ಅರ್ಜುನ್ ತೆಂಡೂಲ್ಕರ್

ಭವಿಷ್ಯದಲ್ಲಿ ಅರ್ಜುನ್‌ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ?

TOI.in 22 Nov 2018, 11:37 am
ಹೊಸದಿಲ್ಲಿ: ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಮಗ ಅರ್ಜುನ್ ತೆಂಡೂಲ್ಕರ್, ಅಂಡರ್-19 ಕೂಚ್ ಬಿಹಾರ್ ಟ್ರೋಫಿಯಲ್ಲಿ ಐದು ವಿಕೆಟುಗಳನ್ನು ಕಬಳಿಸುವ ಮೂಲಕ ಮಿಂಚಿನ ಪ್ರದರ್ಶನ ನೀಡಿದ್ದಾರೆ.
Vijaya Karnataka Web arjun-tendulkar-bowling-03


ಮುಂಬಯಿ ತಂಡವನ್ನು ಪ್ರತಿನಿಧಿಸುತ್ತಿರುವ ಅರ್ಜುನ್ ದಿಲ್ಲಿ ವಿರುದ್ಧದ ಪಂದ್ಯದಲ್ಲಿ 98 ರನ್ ತೆತ್ತು ಐದು ವಿಕೆಟುಗಳನ್ನು ಕಬಳಿಸಿದ್ದರು.

ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೂರನೇ ದಿನದಾಟದ ಅಂತ್ಯಕ್ಕೆ ದಿಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 394 ರನ್ ಗಳಿಸಿತ್ತು. ಇದಕ್ಕೂ ಮೊದಲು ಮುಂಬಯಿ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 453 ರನ್ ಪೇರಿಸಿತ್ತು.

ಪ್ರತಿಭಾವಂತ ಎಡಗೈ ವೇಗಿ ಆಗಿರುವ ಅರ್ಜುನ್ ಶಾಲಾ ಮಟ್ಟದಿಂದಲೇ ಸುದ್ದಿ ಮಾಡುತ್ತಿದ್ದಾರೆ. ಕೆಲವು ಸಮಯಗಳ ಹಿಂದೆಯಷ್ಟೇ ಶ್ರೀಲಂಕಾ ವಿರುದ್ಧದ ಅಂಡರ್ 19 ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿದಿಸಿದ್ದರಲ್ಲದೆ ಮೂರು ವಿಕೆಟುಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದರು.

ಇನ್ನು ನೆಟ್ಸ್‌ನಲ್ಲಿ ಭಾರತ ಸೇರಿದಂತೆ ಇಂಗ್ಲೆಂಡ್ ತಂಡಕ್ಕೂ ದಾಳಿ ನಡೆಸುವ ಮೂಲಕ ಭರವಸೆ ಮೂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌