ಹೊಸದಿಲ್ಲಿ: 17ನೇ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರಚಂಡ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಸುರೇಶ್ ರೈನಾ, ಹರ್ಭಜನ್ ಸಿಂಗ್, ಸೈನಾ ನೆಹ್ವಾಲ್, ಸಾನಿಯಾ ಮಿರ್ಜಾ, ಮೇರಿ ಕೋಮ್, ಪಿ.ವಿ.ಸಿಂಧೂ ಮತ್ತಿತರ ಕ್ರೀಡಾಪಟುಗಳೂ ಅಭಿನಂದನೆಯ ಸಂದೇಶ ರವಾನಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನ ಗೆದ್ದು ಬಹುಮತ ಗಳಿಸಿದೆ.
ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ಸದ್ಯ ಇಂಗ್ಲೆಂಡ್ನಲ್ಲಿರುವ ವಿರಾಟ್ ಕೊಹ್ಲಿ, ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿಯವರನ್ನು ಅಭಿನಂದಿಸಿದ್ದಾರೆ. ''ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಾಳತ್ವದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೇರಲಿದೆ ಎಂದು ನಾವು ನಂಬಿದ್ದೇವೆ, ಜೈ ಹಿಂದ್,'' ಎಂದು ಟ್ವೀಟ್ ಮಾಡಿದ್ದಾರೆ.
ಏತನ್ಮಧ್ಯೆ, ''ನರೇಂದ್ರ ಮೋದಿಯವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಪ್ರಕಾಶಮಾನ ಮತ್ತು ಸದೃಢ ನವ ಭಾರತ ನಿರ್ಮಾಣ ಕಾರ್ಯದಲ್ಲಿ ದೇಶ ನಿಮ್ಮೊಂದಿಗಿದೆ,'' ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.
ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಸುರೇಶ್ ರೈನಾ, ಹರ್ಭಜನ್ ಸಿಂಗ್, ಸೈನಾ ನೆಹ್ವಾಲ್, ಸಾನಿಯಾ ಮಿರ್ಜಾ, ಮೇರಿ ಕೋಮ್, ಪಿ.ವಿ.ಸಿಂಧೂ ಮತ್ತಿತರ ಕ್ರೀಡಾಪಟುಗಳೂ ಅಭಿನಂದನೆಯ ಸಂದೇಶ ರವಾನಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನ ಗೆದ್ದು ಬಹುಮತ ಗಳಿಸಿದೆ.
ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ಸದ್ಯ ಇಂಗ್ಲೆಂಡ್ನಲ್ಲಿರುವ ವಿರಾಟ್ ಕೊಹ್ಲಿ, ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿಯವರನ್ನು ಅಭಿನಂದಿಸಿದ್ದಾರೆ. ''ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಾಳತ್ವದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೇರಲಿದೆ ಎಂದು ನಾವು ನಂಬಿದ್ದೇವೆ, ಜೈ ಹಿಂದ್,'' ಎಂದು ಟ್ವೀಟ್ ಮಾಡಿದ್ದಾರೆ.
ಏತನ್ಮಧ್ಯೆ, ''ನರೇಂದ್ರ ಮೋದಿಯವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಪ್ರಕಾಶಮಾನ ಮತ್ತು ಸದೃಢ ನವ ಭಾರತ ನಿರ್ಮಾಣ ಕಾರ್ಯದಲ್ಲಿ ದೇಶ ನಿಮ್ಮೊಂದಿಗಿದೆ,'' ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.