ಆ್ಯಪ್ನಗರ

ಕ್ರೀಡಾಳುಗಳಲ್ಲಿ ಆಡಬಾರದೆಂದು ಹೇಳಬಾರದು: ಕಪಿಲ್

ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಬೇಕೋ ಬೇಡವೋ ಎಂಬುದರ ಬಗ್ಗೆ ಕೇಂದ್ರ ಸರಕಾರವೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಈ ನಡುವೆ ಕ್ರೀಡಾಳುಗಳಲ್ಲಿ ಆಡಬಾರದೆಂದು ಹೇಳಬಾರದು ಎಂದು ವಿಶ್ವಕಪ್ ವಿಜೇತ ಮಾಜಿ ನಾಯಕ ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.

Times Now 26 Feb 2019, 5:35 pm
ಹೊಸದಿಲ್ಲಿ: ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮಗೊಂಡಿದ್ದರು. ಇದಾದ ಬೆನ್ನಲ್ಲೇ ಪಾಕಿಸ್ತಾನ ಜತೆಗಿನ ಎಲ್ಲ ವ್ಯವಹಾರಗಳನ್ನು ರದ್ದುಗೊಳಿಸುವಂತೆ ವ್ಯಾಪಕ ಜನಾಗ್ರಹ ಮೂಡಿಬಂದಿದೆ.
Vijaya Karnataka Web kapil-dev-ind-vs-aus


ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲೂ ಪಾಕಿಸ್ತಾನ ಜತೆ ಆಡಬಾರದೆಂಬ ಒತ್ತಾಯ ಕೇಳಿ ಬಂದಿತ್ತು. ಈ ಬಗ್ಗೆ ಸಭೆ ಸೇರಿರುವ ಬಿಸಿಸಿಐ ಸಿಒಎ ಸಮಿತಿಯು ಅಂತಿಮ ನಿರ್ಧಾರವು ಸರಕಾರದ್ದೇ ಆಗಿರಲಿದೆ ಎಂಬುದನ್ನು ಸ್ಪಷ್ಟಪಡಿಸಿತ್ತು.

ಏತನ್ಮಧ್ಯೆ ಭಾರತದ ಜೊಚ್ಚಲ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಹೇಳಿಕೆ ನೀಡುತ್ತಾ, ಕ್ರೀಡಾಪಟುಗಳಲ್ಲಿ ಕ್ರೀಡೆಯನ್ನು ಆಡಬಾರದೆಂದು ಯಾವತ್ತೂ ಹೇಳಬಾರದು ಎಂದು ಹೇಳಿದ್ದಾರೆ.

ಓರ್ವ ಕ್ರಿಕೆಟಿಗನಾಗಿ ನಾನು ಭಾವನೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆನು. ಕ್ರೀಡೆಯನ್ನು ಆಡುವುದೇ ನಮಗೆ ಗೊತ್ತು. ಅದೇ ನಮ್ಮ ಧ್ಯೇಯ ಆಗಿರಬೇಕು ಎಂದು ಹೇಳಿದ್ದಾರೆ.

ಈ ಮೊದಲು ಪಾಕಿಸ್ತಾನ ವಿರುದ್ಧ ಆಡಬೇಕೋ ಬೇಡವೋ ಎಂಬುದನ್ನು ಸರಕಾರವೇ ನಿರ್ಧರಿಸಲಿ ಎಂದು ಕಪಿಲ್ ಅಭಿಪ್ರಾಯಪಟ್ಟಿದ್ದರು.

ಭಾರತ ಹಾಗೂ ಪಾಕಿಸ್ತಾನ ನಡುವಣ ಏಕದಿನ ವಿಶ್ವಕಪ್ ಪಂದ್ಯ ಜೂನ್ 16ರಂದು ನಿಗದಿಯಾಗಿದೆ. ಒಂದು ವೇಳೆ ವಿಶ್ವಕಪ್‌ನಿಂದ ಹಿಂಜರಿದರೆ ಮಹತ್ವದ ಎರಡು ಅಂಕಗಳನ್ನು ಭಾರತ ಕಳೆದುಕೊಳ್ಳಲಿದೆ. ಇದನ್ನು ನಾನು ಇಷ್ಟಪಡಲಾರೆ. ಇದರ ಬದಲಾಗಿ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಗೆಲುವು ದಾಖಲಿಸಬೇಕು ಎಂದು ಮಾಜಿ ಕ್ರಿಕೆಟ್ ಐಕಾನ್‌ಗಳಾದ ಸಚಿನ್ ತೆಂಡೂಲ್ಕರ್ ಹಾಗೂ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದರು.

ಅಂದ ಹಾಗೆ ಪುಲ್ವಾಮಾ ದಾಳಿಯ 12 ದಿನಗಳ ಬಳಿಕ ತಿರುಗೇಟು ನೀಡಿರುವ ಭಾರತೀಯ ವಾಯುಪಡೆಯು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಕ್ಕೆ ನಡೆಸಿದ ವೈಮಾನಿಕ ದಾಳಿಯಲ್ಲಿ 200ರಿಂದ 300 ಉಗ್ರರನ್ನು ಹತ್ಯೆಗೈಯಲಾಗಿದೆ ಎಂಬುದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌