ಆ್ಯಪ್ನಗರ

ಆಂಗ್ಲರ ನಾಡಿನಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಮ್ ಇಂಡಿಯಾ

ಬ್ರಿಟಿಷರ ಆಡಳಿತದಿಂದ ಭಾರತ ದೇಶವು 1947 ಆಗಸ್ಟ್ 15ರಂದು ಸ್ವತಂತ್ರವಾಯಿತು. ಇದೀಗ ಅದೇ ಆಂಗ್ಲರ ನಾಡಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಟೀಮ್ ಇಂಡಿಯಾ ಆಟಗಾರರು ಗಮನ ಸೆಳೆದಿದ್ದಾರೆ.

Vijaya Karnataka Web 15 Aug 2018, 8:20 pm
ಹೊಸದಿಲ್ಲಿ: ಬ್ರಿಟಿಷರ ಆಡಳಿತದಿಂದ ಭಾರತ ದೇಶವು 1947 ಆಗಸ್ಟ್ 15ರಂದು ಸ್ವತಂತ್ರವಾಯಿತು. ಇದೀಗ ಅದೇ ಆಂಗ್ಲರ ನಾಡಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಟೀಮ್ ಇಂಡಿಯಾ ಆಟಗಾರರು ಗಮನ ಸೆಳೆದಿದ್ದಾರೆ.
Vijaya Karnataka Web kohl-shastri-flag-hosting


ಪ್ರಸ್ತುತ ಭಾರತ ಕ್ರಿಕೆಟ್ ತಂಡದ ಆಟಗಾರರು ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ತಲ್ಲೀನವಾಗಿದ್ದಾರೆ. ಇದರಂತೆ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗಿದೆ.

ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡದೆಲ್ಲ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಕೊಹ್ಲಿ, ದೇಶದೆಲ್ಲ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ರವಾನಿಸಿದರು.

72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಮಕಾಲೀನ, ಮಾಜಿ ಕ್ರಿಕೆಟಿಗರು ಸೇರಿದಂತೆ ಇತರೆ ಕ್ರೀಡಾಳುಗಳು ದೇಶದ ನಿವಾಸಿಗಳಿಗೆ ಶುಭ ಹಾರೈಸಿದ್ದಾರೆ. ಅಲ್ಲದೆ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಜಿಸಿರುವ ಧೀರ ಯೋಧರು ಹಾಗೂ ಗಡಿ ಕಾಯುವ ಸೈನಿಕರನ್ನು ಸ್ಮರಿಸಿದ್ದಾರೆ.

ಅಂದ ಹಾಗೆ ಇಂಗ್ಲೆಂಡ್ ವಿರುದ್ದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಟೀಮ್ ಇಂಡಿಯಾ 0-2ರ ಅಂತರದ ಹಿನ್ನಡೆ ಅನುಭವಿಸಿದೆ. ಅಲ್ಲದೆ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲಲು ಮುಂದಿನೆಲ್ಲ ಪಂದ್ಯಗಳಲ್ಲಿ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌