ಆ್ಯಪ್ನಗರ

ಪಂದ್ಯ ಶುಲ್ಕವನ್ನು ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಗಳಿಗೆ ಸಮರ್ಪಿಸಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಸೇನೆಗೆ ಗೌರವಾರ್ಥವಾಗಿ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿದಿದೆ. ಅಲ್ಲದೆ ಪಂದ್ಯ ಶುಲ್ಕವನ್ನು ಹುತಾತ್ಮ ಯೋಧರ ಕುಟುಂಬಗಳ ಪೋಷಣೆಗಾಗಿ ಸಮರ್ಪಿಸಿದ್ದಾರೆ.

Vijaya Karnataka Web 8 Mar 2019, 2:10 pm
ರಾಂಚಿ: ಆಸ್ಟ್ರೇಲಿಯಾ ವಿರುದ್ದ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದ ಶುಲ್ಕವನ್ನು ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ನೀಡುವ ಮೂಲಕ ಟೀಮ್ ಇಂಡಿಯಾ ಆಟಗಾರರು ದೇಶಪ್ರೇಮವನ್ನು ಮೆರೆದಿದ್ದಾರೆ.
Vijaya Karnataka Web team-india-cap


ಆಸ್ಟ್ರೇಲಿಯಾ ವಿರುದ್ಧ ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಭಾರತೀಯ ಸೇನೆಯ ಗೌರವಾರ್ಥವಾಗಿ ಟೀಮ್ ಇಂಡಿಯಾ ಆಟಗಾರರುವ ವಿಶೇಷವಾಗಿ ನಿರ್ಮಿಸಿದ ಆರ್ಮಿ ಕ್ಯಾಪ್ ಧರಿಸಿಕೊಂಡು ಕಣಕ್ಕಿಳಿದಿದೆ.

ಇಂಡಿಯನ್ ಆರ್ಮಿಯಲ್ಲಿ ಗೌರವಾನ್ವಿತ ಲೆಫ್ಟಿನಂಟ್ ಕರ್ನಲ್ ಹುದ್ದೆಯನ್ನು ಹೊಂದಿರುವ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಸಹ ಆಟಗಾರರಿಗೆ ಕ್ಯಾಪ್‌ಗಳನ್ನು ಹಸ್ತಾಂತರಿಸಿದರು.

ಟಾಸ್ ಸಂದರ್ಭದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ನಾಯಕ ವಿರಾಟ್ ಕೊಹ್ಲಿ, ಭಾರತೀಯ ಸೇನೆಯ ಗೌರವಾರ್ಥ ವಿಶೇ, ಆರ್ಮಿ ಕ್ಯಾಪ್ ಧರಿಸಿ ಆಟವಾಡುತ್ತಿರುವುದಾಗಿ ತಿಳಿಸಿದರು.

ಅಲ್ಲದೆ ಪಂದ್ಯ ಶುಲ್ಕವನ್ನು ರಾಷ್ಟ್ರೀಯ ಡಿಫೆನ್ಸ್ ನಿಧಿಗೆ ಸಮರ್ಪಿಸುವುದಾಗಿ ಘೋಷಿಸಿದರು. ಅಲ್ಲದೆ ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತ್ಮಾತರಾದ ಧೀರ ಯೋಧರ ಕುಟುಂಬಗಳಿಗೆ ತಮ್ಮಿಂದಾಗುವ ಸಹಾಯವನ್ನು ಮಾಡುವಂತೆ ದೇಶದ ಜನತೆಯಲ್ಲೂ ವಿನಂತಿಸಿಕೊಂಡಿದ್ದಾರೆ.

ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮಗೊಂಡಿದ್ದರು. ತದಾ ಬಳಿಕ ಫೆಬ್ರವರಿ 26ರಂದು ಭಾರತೀಯ ಸೇನೆಯು ಪಾಕ್ ನೆಲದಲ್ಲಿ ವೈಮಾನಿಕ ದಾಳಿಯನ್ನು ನಡೆಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌