ಆ್ಯಪ್ನಗರ

ಟೀಮ್‌ ಇಂಡಿಯಾದಲ್ಲಿ ಎಲ್ಲವೂ ಸರಿಯಾಗಿದೆ, ಬಣ ಜಗಳ ಇಲ್ಲ: ವಿರಾಟ್‌ ಕೊಹ್ಲಿ

ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಸೋತ ನಂತರ ಟೀಮ್‌ ಇಂಡಿಯಾದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಗುಮಾನಿ ಬಂತು. ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ನಡುವೆ ಶೀತಲ ಸಮರ ನಡೆದಿದೆ ಎಂಬ ಮಾತುಗಳು ಕೇಳಿಬಂದಿದ್ದವು.

Vijaya Karnataka Web 29 Jul 2019, 8:12 pm
ಮುಂಬಯಿ: ಟೀಮ್‌ ಇಂಡಿಯಾದಲ್ಲಿ ಯಾವುದೇ ರೀತಿಯ ಬಣ ಜಗಳ ಇಲ್ಲ. ಈ ಬಗ್ಗೆ ಕೆಲವು ವದಂತಿಗಳು ಹಬ್ಬಿವೆ. ಅವೆಲ್ಲ ಸುಳ್ಳು ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ


ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಳ್ಳುವುದಕ್ಕೂ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ವಿರಾಟ್‌ ಕೊಹ್ಲಿ ಹಲವಾರು ವಿಷಯಗಳನ್ನು ಹಂಚಿಕೊಂಡರು.

ಟೀಮ್‌ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಜತೆಗೆ ಯಾವುದೇ ರೀತಿಯ ಮುಸುಕಿನ ಗುದ್ದಾಟ ನಡೆದಿಲ್ಲ. ರೋಹಿತ್‌ ಜತೆಗೆ ಯಾವುದೇ ಭಿನ್ನಾಭಿಪ್ರಾಯ ಕೂಡ ಇಲ್ಲ. ನಮ್ಮಿಬ್ಬರ ನಡುವಿನ ಕಿತ್ತಾಟ ಬಗ್ಗೆ ಬಂದಿರುವ ವರದಿಗಳು ಸುಳ್ಳು ಹಾಗೂ ಹಾಸ್ಯಾಸ್ಪದ ಎಂದು ಕೊಹ್ಲಿ ತಿಳಿಸಿದ್ದಾರೆ.

ನನಗೆ ಯಾರ ಬಗ್ಗೆಯಾದರೂ ಕೋಪ ಅಥವಾ ಅಸಮಾಧಾನ ಇದ್ದರೆ ನನ್ನ ಮುಖದಲ್ಲಿಯೇ ಅದು ಗೊತ್ತಾಗುತ್ತದೆ. ನಾನೇನೂ ಜಗಳ ಆಡಬೇಕಾಗಿಲ್ಲ ಎಂದು ಟೀಮ್‌ ಇಂಡಿಯಾ ನಾಯಕ ತಿಳಿಸಿದ್ದಾರೆ.


ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಾಗಿದೆ. ಪರಸ್ಪರ ಸಂಬಂಧ ಸರಿ ಇಲ್ಲದಿದ್ದರೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ವಿರಾಟ್‌ ಕೊಹ್ಲಿ ಹೇಳಿದರು.

ವಿಶ್ವಕಪ್‌ ಟೂರ್ನಿಯ ಬಳಿಕ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ನಡುವೆ ಸಂಬಂಧ ಹದಗೆಟ್ಟಿದೆ. ಪರಸ್ಪರ ಮಾತುಕತೆ ಕೂಡ ಕಡಿಮೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿರಾಟ್‌ ಕೊಹ್ಲಿಯನ್ನು ಅನ್‌ಫಾಲೋ ಮಾಡಿದ್ದಾರೆ ಎಂಬ ವರದಿಗಳು ಕೆಲವು ದಿನಗಳಿಂದ ಬರುತ್ತಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌