ಆ್ಯಪ್ನಗರ

ವಿಜಯ್ ಶಂಕರ್ ರೋಚಕ ಫೈನಲ್ ಓವರ್ ಹೇಗಿತ್ತು?

ವಿಜಯ್ ಶಂಕರ್ ಭಾರತಕ್ಕೆ ಎಂಟು ರನ್‌ಗಳ ರೋಚಕ ಗೆಲುವನ್ನು ಒದಗಿಸಿಕೊಡುವಲ್ಲಿ ನೆರವಾಗಿದ್ದಾರೆ. ಈ ಮೂಲಕ ಭಾರತ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

Vijaya Karnataka Web 6 Mar 2019, 5:07 pm
ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಎಂಟು ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
Vijaya Karnataka Web shankar-kuldeep


ಮೊದಲು ನಾಯಕ ವಿರಾಟ್ ಕೊಹ್ಲಿ ಶತಕದ ಬೆಂಬಲದೊಂದಿಗೆ ಟೀಮ್ ಇಂಡಿಯಾ 250 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಬಳಿಕ ಬೌಲಿಂಗ್‌ನಲ್ಲಿ ಸಾಂಘಿಕ ಪ್ರದರ್ಶನ ನೀಡುವ ಮೂಲಕ ರೋಚಕ ಗೆಲುವು ದಾಖಲಿಸಿತ್ತು.

ಅಂತಿಮ ಓವರ್‌ನಲ್ಲಿ ಗೆಲುವಿಗೆ 11 ರನ್‌ಗಳ ಅವಶ್ಯಕತೆಯಿತ್ತು. ಆದರೆ ಸೆಟ್ ಬ್ಯಾಟ್ಸ್‌ಮನ್ ಮಾರ್ಕಸ್ ಸ್ಟೋಯ್ನಿಸ್ ಜತೆಗೆ ಎರಡು ಪ್ರಮುಖ ವಿಕೆಟುಗಳನ್ನು ಕಬಳಿಸಿದ ಶಂಕರ್ ಭಾರತಕ್ಕೆ ಗೆಲುವನ್ನು ಒದಗಿಸಿಕೊಟ್ಟರು.

ಈ ಮೂಲಕ ಅತಿ ಒತ್ತಡದ ಪಂದ್ಯದಲ್ಲಿ ಅತ್ಯುತ್ತಮ ನಿರ್ವಹಣೆ ನೀಡುವಲ್ಲಿ ಯಶಸ್ವಿಯಾದರು. ಪ್ರಸ್ತುತ ವಿಜಯ್ ಅವರ ಕೊನೆಯ ಓವರ್ ದಾಳಿಯನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಇದನ್ನು ತಪ್ಪದೇ ವೀಕ್ಷಿಸಿ ಭಾರತದ ಗೆಲುವಿನ ಕ್ಷಣಗಳನ್ನು ಆನಂದಿಸಿ...

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌