ಆ್ಯಪ್ನಗರ

ಮಹೇಂದ್ರ ಸಿಂಗ್ ಧೋನಿ ಭವಿಷ್ಯ ಕೇಳಿದಾಗ ವಿರಾಟ್ ಕೊಹ್ಲಿ ಉತ್ತರ ಹೀಗಿತ್ತು!

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆಲುವಿನ ಬಳಿಕ ಟೀಮ್ ಇಂಡಿಯಾ ಡ್ರೆಸ್ಸಿಂಗ್ ಕೊಠಡಿಗೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭೇಟಿ ಕೊಟ್ಟಿದ್ದರು. ಪ್ರಸ್ತುತ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Vijaya Karnataka Web 22 Oct 2019, 12:49 pm
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 202 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡಿದೆ.
Vijaya Karnataka Web dhoni-kohli-03


ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪ್ರಶ್ನೆಯೊಂದು ಎದುರಾಗಿತ್ತು. ವರದಿಗಾರರೊಬ್ಬರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭವಿಷ್ಯದ ಬಗ್ಗೆ ವಿಚಾರಿಸಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಬರೆದ ಪ್ರಮುಖ ದಾಖಲೆಗಳ ಪಟ್ಟಿ ಇಂತಿದೆ:

ಇದಕ್ಕೆ ನಗುಮುಖದಿಂದಲೇ ಉತ್ತರಿಸಿದ ವಿರಾಟ್, "ಧೋನಿ ಇಲ್ಲಿದ್ದಾರೆ. ಬನ್ನಿ ಚೇಂಜ್ ರೂಮ್‌ಗೆ, ಬಂದು ಹಲೋ ಹೇಳಿಬಿಡಿ" ಎಂದು ಹೇಳಿದರು.

ಪ್ರಸ್ತುತ ವಿರಾಟ್ ಕೊಹ್ಲಿ ಉತ್ತರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ. ಭಾರತದ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಸ್ಥಳೀಯ ಹೀರೊ ಕೂಡಾ ಆಗಿರುವ ಧೋನಿ ಟೀಮ್ ಇಂಡಿಯಾ ಆಟಗಾರರನ್ನು ಅಭಿನಂದಿಸಲು ಡ್ರೆಸ್ಸಿಂಗ್ ಕೊಠಡಿಗೆ ಆಗಮಿಸಿದ್ದರು.

5 ಪಂದ್ಯಗಳಲ್ಲಿ ಭರ್ತಿ 240 ಅಂಕ; ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಾಗಾಲೋಟ!

ಭಾರತ ಕೋಚ್ ರವಿಶಾಸ್ತ್ರಿ ಸಹ ಧೋನಿ ಜತೆಗಿನ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ತಮ್ಮ ಟ್ವೀಟ್‌ನಲ್ಲಿ ಲೆಜೆಂಡ್ ಎಂದು ಉಲ್ಲೇಖಿಸಿದ್ದಾರೆ.

ಯುವ ಸ್ಪಿನ್ನರ್ ಜಾರ್ಖಂಡ್ ಮೂಲದವರೇ ಆಗಿರುವ ಶಹಬಾಜ್ ನದೀಂ ಅವರಿಗೂ ಧೋನಿ ಅಮೂಲ್ಯ ಟಿಪ್ಸ್‌ಗಳನ್ನು ನೀಡುತ್ತಿರುವ ಚಿತ್ರವನ್ನು ಬಿಸಿಸಿಐ ಹಂಚಿಕೊಂಡಿದೆ.

ಸರಣಿ ಗೆದ್ದ ಖುಷಿಯ ನಡುವೆ ಭಾರತೀಯ ಡ್ರೆಸ್ಸಿಂಗ್ ಕೊಠಡಿಗೆ ಭೇಟಿ ಕೊಟ್ಟ ವಿಶೇಷ ಆತಿಥಿ

ಅಷ್ಟಕ್ಕೂ ಏಕದಿನ ವಿಶ್ವಕಪ್ ಬಳಿಕ ವಿಶ್ರಾಂತಿಯಲ್ಲಿರುವ ಧೋನಿ, ಯಾವಾಗ ಕ್ರಿಕೆಟ್‌ಗೆ ಮರಳಲಿದ್ದಾರೆ ಅಥವಾ ನಿವೃತ್ತಿ ಪಡೆಯಲಿದ್ದಾರೆಯೇ ಎಂಬುದು ಬಹಳಷ್ಟು ಕುತೂಹಲವೆನಿಸಿದೆ. ಅಕ್ಟೋಬರ್ 24ರಂದು ಆಯ್ಕೆ ಸಮಿತಿ ಜತೆಗೆ ನೂತನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತುಕತೆ ನಡೆಯುವ ಸಾಧ್ಯತೆಯಿದೆ.

ಅಂದ ಹಾಗೆ ಐದು ವರ್ಷಗಳ ಹಿಂದೆಯೇ ಅಂದರೆ 2014ರಲ್ಲಿ ಧೋನಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ್ದರು. ತದಾ ಬಳಿಕ ವಿರಾಟ್ ಕೊಹ್ಲಿ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದರು.

ಹರಿಣಗಳಿಗೆ ವೈಟ್‌ವಾಶ್ ಬಳಿದ ಭಾರತ; ವಿರಾಟ್ ಕೊಹ್ಲಿ ಪಡೆಯ ವಿಶೇಷ ಸಾಧನೆ

ಬಾಂಗ್ಲಾದೇಶ ವಿರುದ್ಧದ ಸರಣಿಗಾಗಿನ ಟೀಮ್ ಇಂಡಿಯಾ ಆಯ್ಕೆ ಅಕ್ಟೋಬರ್ 24ರಂದು ನಡೆಯಲಿದೆ. ಮಹೇಂದ್ರ ಸಿಂಗ್ ಧೋನಿ ಕಮ್‌ಬ್ಯಾಕ್ ಮಾಡುವರೇ ಎಂಬುದು ಅಭಿಮಾನಿಗಳಲ್ಲಿ ಬಹಳಷ್ಟು ಕುತೂಹಲ ಮನೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌