ಆ್ಯಪ್ನಗರ

2014ರಲ್ಲಿ ಮಾನಸಿಕ ಖಿನ್ನತೆಗೊಳಗಾಗಿದ್ದ ವಿರಾಟ್ ಕೊಹ್ಲಿ

2014ರಲ್ಲಿ ಇಂಗ್ಲೆಂಡ್ ವಿರುದ್ಧದ ಅತಿ ಕೆಟ್ಟ ಬ್ಯಾಟಿಂಗ್ ಪ್ರದರ್ಶನದ ಬಳಿಕ ತಮ್ಮ ಪಾಲಿಗೆ ಇಡೀ ಜಗತ್ತೇ ಅಂತ್ಯಗೊಂಡಿತ್ತು ಎಂಬಂತೆ ಭಾಸವಾಗಿತ್ತು ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾನಸಿಕ ಖಿನ್ನತೆಯ ಬಗ್ಗೆ ಮಾತನಾಡಿದ್ದಾರೆ.

Vijaya Karnataka Web 14 Nov 2019, 12:24 pm
ಇಂದೋರ್: ಮಾನಸಿಕ ತೊಂದರೆ ಅನುಭವಿಸುತ್ತಿರುವ ಆಸ್ಟ್ರೇಲಿಯಾದ ಆಲ್‌ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕ್ರಿಕೆಟ್‌ನಿಂದ ಅನಿರ್ದಿಷ್ಟಾವಧಿ ಅವಧಿಯ ವರೆಗೆ ವಿರಾಮವನ್ನು ತೆಗೆದುಕೊಂಡಿದ್ದಾರೆ.
Vijaya Karnataka Web ವಿರಾಟ್ ಕೊಹ್ಲಿ


ಇದನ್ನು ಸ್ವಾಗತಿಸಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, 2014ರಲ್ಲಿ ಸ್ವತ: ತಮಗೆ ಎದುರಾಗಿರುವ ಮಾನಸಿಕ ಖಿನ್ನತೆ ಸಮಸ್ಯೆಯ ಬಗ್ಗೆ ವಿವರಣೆಯನ್ನು ನೀಡಿದ್ದಾರೆ.

2014ರ ಇಂಗ್ಲೆಂಡ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡಿರುವ 10 ಇನ್ನಿಂಗ್ಸ್‌ಗಳಲ್ಲಿ ಕೇವಲ 134 ರನ್ ಮಾತ್ರ ಗಳಿಸಿದ್ದರು. ಈ ಮೂಲಕ ಸತತ ವೈಫಲ್ಯಕ್ಕೊಳಗಾಗಿದ್ದರು.

ಮಗದೊಂದು ಸ್ಮರಣೀಯ ಮೈಲುಗಲ್ಲು ತಲುಪಿದ ರೋಹಿತ್ ಶರ್ಮಾ

ನನ್ನ ವೃತ್ತಿ ಜೀವನದ ಒಂದು ಹಂತದಲ್ಲಿ ಜಗತ್ತೇ ಅಂತ್ಯವಾಗಿದೆ ಎಂದು ಭಾವಿಸಿದ್ದೆ. 2014ರ ಇಂಗ್ಲೆಂಡ್ ಪ್ರವಾಸದ ಬಳಿಕ ಏನು ಮಾಡಬೇಕೆಂದು ತೋಚುತ್ತಿರಲಿಲ್ಲ. ಯಾರಿಗಾದರೂ ಏನನ್ನು ಹೇಳಲಿ, ಹೇಗೆ ಮಾತನಾಡಬೇಕು, ಹೇಗೆ ಸಂವಹನ ಮಾಡಬೇಕು ಎಂಬುದು ತಿಳಿದಿರಲಿಲ್ಲ ಎಂದು ವಿವರಿಸಿದರು.

ಪ್ರಾಮಾಣಿಕವಾಗಿ ಹೇಳಬೇಕೆಂದರೆ ಮಾನಸಿಕವಾಗಿ ಉತ್ತಮ ಪರಿಸ್ಥಿತಿಯಲ್ಲಿರಲಿಲ್ಲ. ಪಂದ್ಯದಿಂದ ದೂರವಿರಲು ಬಯಸಿದ್ದೆ ಎಂದು ಕ್ಯಾಪ್ಟನ್ ಕೊಹ್ಲಿ ಸೇರಿಸಿದರು.

ಇಷ್ಟಾದರೂ ವಿರಾಮ ಪಡೆದುಕೊಳ್ಳಬೇಕೇ ಎಂಬ ಬಗ್ಗೆಯೂ ತಮ್ಮಲ್ಲಿ ಖಚಿತತೆ ಇರಲಿಲ್ಲ ಎಂದು ಕ್ಯಾಪ್ಟನ್ ಕೊಹ್ಲಿ ವಿವರಿಸಿದರು.

ದಾದಾ ದಾಖಲೆಯ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

ನನಗನಿಸುತ್ತದೆ ಇಂತಹ ಅಂಶಗಳು ಹೆಚ್ಚು ಪ್ರಾಮುಖ್ಯತೆಯನ್ನು ಗಿಟ್ಟಿಸಿಕೊಳ್ಳುತ್ತದೆ. ಒಬ್ಬ ಆಟಗಾರ ಮುಖ್ಯ ಎನಿಸಿದರೆ ಆತನತ್ತ ಭಾರತೀಯ ಕ್ರಿಕೆಟ್ ಹೆಚ್ಚಿನ ಗಮನ ಹರಿಸಬೇಕು ಎಂದು ವಿರಾಟ್ ಸೇರಿಸಿದರು.

ನಿಮಗೊಂದು ಕರ್ತವ್ಯವಿರುತ್ತದೆ. ಪ್ರತಿಯೊಬ್ಬರು ಅದರಲ್ಲಿ ಗಮನ ಕೇಂದ್ರಿತರಾಗಿರುತ್ತಾರೆ. ಆದರೆ ಇನ್ನೊಬ್ಬರ ಮನದಲ್ಲಿ ಏನಿದೆ ಎಂಬುದನ್ನು ಅರಿತುಕೊಳ್ಳುವುದು ಕಷ್ಟಕರ ಎಂದರು.

ಭಾರತೀಯ ಕ್ರಿಕೆಟ್‌ನಲ್ಲೂ ದೈನಂದಿನ ಪೈಪೋಟಿ ಹೆಚ್ಚುತ್ತಿದೆ. ದೇಶೀಯ ಕ್ರಿಕೆಟ್‌ನಲ್ಲೂ ಸ್ಪರ್ಧೆ ಹೆಚ್ಚಿದೆ. ಆತಂಕ ಹಾಗೂ ಅಭದ್ರತೆಯಿಂದಾಗಿ ಆಟಗಾರರು ಕೆಟ್ಟ ಪ್ರದರ್ಶನ ನೀಡುತ್ತಾರೆ. ಅವರಿಗೆ ಸಹಾಯದ ಅಗತ್ಯವಿದೆ ಎಂದು ನುಡಿದರು.

ಭಾರತ vs ಬಾಂಗ್ಲಾದೇಶ ಲೈವ್ ಅಪ್‌ಡೇಟ್ಸ್

ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಮೂಲಕ ವಿಶ್ವ ಕ್ರಿಕೆಟಿಗರಿಗೆ ಮಾದರಿಯಾಗಿದ್ದಾರೆ. ನೀವು ಉತ್ತಮ ಮನೋಭಾವದ ಚೌಕಟ್ಟಿನಲ್ಲಿಲ್ಲದಿದ್ದರೆ, ನೀವು ಪದೇ ಪದೇ ಪ್ರಯತ್ನಿಸುತ್ತೀರಿ. ಆದರೆ ಕೆಲವು ಹಂತದಲ್ಲಿ ತುತ್ತ ತುದಿಯನ್ನು ತಲುಪುತ್ತೇವೆ. ಹಾಗಾಗಿ ಹೆಚ್ಚಿನ ಸಮಯದ ಅಗತ್ಯವಿರುತ್ತದೆ ಎಂದರು.

ಕ್ರಿಕೆಟ್ ಮೀರಿ ಜೀವನವೊಂದಿದೆ. ಪ್ರತಿಯೊಬ್ಬರು ತಮ್ಮ ವೃತ್ತಿ ಜೀವನದಲ್ಲಿ ಏಳು ಬೀಳುಗಳನ್ನು ಅನುಭವಿಸುತ್ತಾರೆ. ಹೇಗಾದರೂ, ಅವುಗಳನ್ನು ಗುರುತಿಸಿ ತ್ವರಿತವಾಗಿ ಪರಿಹರಿಸುವುದು ಅಗತ್ಯವೆನಿಸಿದೆ ಎಂದು ವಿರಾಟ್ ತಿಳಿಸಿದರು.

2010ರಲ್ಲೇ ದೀಪಕ್‌ ಚಹರ್‌ ಭವಿಷ್ಯ ನುಡಿದಿದ್ದ ಆಕಾಶ್‌ ಚೋಪ್ರಾ: ವೈರಲ್‌ ಆಯ್ತು ಟ್ವೀಟ್‌

ಋಣಾತ್ಮಕವಾಗಿ ಚಿಂತಿಸುವ ಬದಲು ಈ ವಿಷಯಗಳನ್ನು ಗೌರವಿಸಬೇಕು ಎಂದು ನಾನು ಭಾವಿಸುತ್ತೇನೆ. ಮಾನವರಾಗಿ ಇದು ಸಂಭವಿಸುತ್ತದೆ. ಹಾಗಾಗಿ ಧನಾತ್ಮಕವಾಗಿ ಇದನ್ನು ತೆಗೆದುಕೊಳ್ಳಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌