ಆ್ಯಪ್ನಗರ

ಶ್ರೀರಾಮ್ ಜೈ ರಾಮ್ ಜೈ ಜೈ ರಾಮ್; ಅಯೋಧ್ಯೆ ತೀರ್ಪು ಸ್ವಾಗತಿಸಿದ ವೀರೇಂದ್ರ ಸೆಹ್ವಾಗ್

ಅಯೋಧ್ಯೆ ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ತೀರ್ಪನ್ನು ಭಾರತದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಸ್ವಾಗತಿಸಿದ್ದಾರೆ.

Vijaya Karnataka Web 9 Nov 2019, 3:37 pm
ಹೊಸದಿಲ್ಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ದಶಕಗಳಿಂದಲೂ ವಿವಾದದಲ್ಲಿರುವ 2. 77 ಎಕರೆ ರಾಮಮಮಂದಿರ, ಬಾಬಾರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸರ್ವಾನುಮತದ ತೀರ್ಪು ನೀಡಿದೆ.
Vijaya Karnataka Web ವೀರೇಂದ್ರ ಸೆಹ್ವಾಗ್ - ಅಯೋಧ್ಯೆ ತೀರ್ಪು


ಇದರೊಂದಿಗೆ 1885ನೇ ಇಸವಿಯಿಂದ ನಡೆಯುತ್ತಿದ್ದ ರಾಮ ಜನ್ಮಭಮಿ ಹಾಗೂ ಬಾಬರಿ ಮಸೀದಿ ಭೂ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ.

Ayodhya Verdict: ವಿವಾದಿತ ಜಾಗ ರಾಮ್‌ಲಲ್ಲಾ ಪಾಲು, ಸುನ್ನಿ ವರ್ಕ್‌ ಬೋರ್ಡ್‌ಗೂ ಐದು ಎಕರೆ ಜಾಗ

ಸುಪ್ರೀಂ ಕೋರ್ಟ್ ತೀರ್ಪನ್ನು ರಾಜಕೀಯ, ಧಾರ್ಮಿಕ ನಾಯಕ ಸೇರಿದಂತೆ ಬಹುತೇಕ ಸಂಘ ಸಂಸ್ಥೆಗಳು ಸ್ವಾಗತಿಸಿದೆ. ಸುನ್ನಿ ವಕ್ಫ್‌ ಮಂಡಳಿ ತೀರ್ಪನ್ನು ಸ್ವಾಗತಿಸಿದರೂ ಕೆಲವೊಂದು ವಿಷಯಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದಿದೆ.

ಈ ಮಧ್ಯೆ ಅಯೋಧ್ಯೆ ತೀರ್ಪನ್ನು ಸ್ವಾಗತಿಸಿರುವ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ಶ್ರೀರಾಮ ದೇವರ ಚಿತ್ರ ಪ್ರಕಟಿಸಿರುವ ವೀರು, ಶ್ರೀರಾಮ್ ಜೈ ರಾಮ್ ಜೈ ಜೈ ರಾಮ್ ಎಂದು ಕೈ ಮುಗಿದಿದ್ದಾರೆ.

ರಾಮಭಕ್ತಿ, ರಹೀಮ್‌ ಭಕ್ತಿ ಜತೆಗೆ ರಾಷ್ಟ್ರ ಭಕ್ತಿ ಹೆಚ್ಚಿಸೋಣ: ನರೇಂದ್ರ ಮೋದಿ

ಅಯೋಧ್ಯೆ ರಾಮ ಮಂದಿನ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಮಂದಿರ ನಿರ್ಮಾಣ ಸಂಬಂಧ ಮೂರು ತಿಂಗಳೊಳಗೆ ಟ್ರಸ್ಟ್ ರಚಿಸುವಂತೆ ಕೇಂದ್ರ ಸರಕಾರಕ್ಕೆ ಸರ್ವೋಚ್ಛ ನ್ಯಾಯಾಲಯ ಸೂಚಿಸಿದೆ. ಅದೇ ಹೊತ್ತಿಗೆ ಸುನ್ನಿ ವಕ್ಫ್‌ ಮಂಡಳಿಗೆ ಅಯೋಧ್ಯೆಯಲ್ಲೇ ಐದು ಎಕರೆ ಪರ್ಯಾಯ ಜಮೀನು ನೀಡುವಂತೆ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌