ಆ್ಯಪ್ನಗರ

ವಿ ಆರ್ ಬ್ಯಾಕ್; ಸಿಎಸ್‌ಕೆ ಕ್ಯಾಪ್ಟನ್ ಧೋನಿ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ, 2018ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

TIMESOFINDIA.COM 30 Mar 2018, 10:16 pm
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ, 2018ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
Vijaya Karnataka Web dhoni-01


ಎರಡು ವರ್ಷಗಳ ನಿಷೇಧದ ಬಳಿಕ ಐಪಿಎಲ್‌ಗೆ ಸಿಎಸ್‌ಕೆ ಕಮ್‌ಬ್ಯಾಕ್ ಮಾಡುತ್ತಿದೆ. ಇದರಂತೆ ಧೋನಿ ಕೂಡಾ ತುಂಬಾ ಭಾವುಕರಾಗಿ ಕಂಡುಬಂದರು.

ನಾವು ಹಿಂತಿರುಗಿದ್ದೇವೆ. ಸಂಪೂರ್ಣ ತಂಡದೊಂದಿಗೆ ಹಿಂತಿರುಗಿದ್ದೇವೆ ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸವಾಲನ್ನು ಚೆನ್ನೈ ಸೂಪರ್ ಕಿಂಗ್ಸ್ ಎದುರಿಸಲಿದೆ.

ಸಾರ್ವಜನಿಕವಾಗಿ ಭಾವನೆಗಳನ್ನು ಹಂಚಿಕೊಳ್ಳದ ಧೋನಿ ಭಾವುಕರಾಗಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ನಗುಮುಖದಿಂದಲೇ ಮುಂದಕ್ಕೆ ಹೋಗಬೇಕಾಗಿರುವುದು ಅತಿ ಮುಖ್ಯ ಎಂದವರು ನುಡಿದರು.

ಧೋನಿ ಮುಂದಾಳತ್ವದಲ್ಲಿ ಸಿಎಸ್‌ಕೆ ಎರಡು ಬಾರಿ ಚಾಂಪಿಯನ್ ಪಟ್ಟ ಗೆದ್ದಿತ್ತು. ಅಲ್ಲದೆ ಐಪಿಎಲ್ ಆರಂಭದಿಂದಲೂ ಅತ್ಯಂತ ಸ್ಥಿರ ಪ್ರದರ್ಶನ ನೀಡುವ ತಂಡ ಹಾಗೂ ಅತಿ ಜನಪ್ರಿಯ ತಂಡವೆಂಬ ಖ್ಯಾತಿಗೂ ಪಾತ್ರವಾಗಿತ್ತು.

ಧೋನಿ ಕಣ್ಣಲ್ಲಿ ನೀರು ಜಿನುಗಿದ್ದನ್ನು ಕಂಡ ತಂಡದ ಉಪನಾಯಕ ಸುರೇಶ್‌ ರೈನಾ, ಸುದ್ದಿಗೋಷ್ಠಿಯ ವೇದಿಕೆಗೆ ಧಾವಿಸಿ ಧೋನಿ ಅವರಿಗೆ ಕುಡಿಯಲು ನೀರು ಕೊಟ್ಟರು ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌