ಆ್ಯಪ್ನಗರ

ಕೋಚ್ ಸ್ಥಾನದಲ್ಲಿ ರವಿಶಾಸ್ತ್ರಿ ಮುಂದುವರಿಯಬೇಕು: ಕೊಹ್ಲಿ

ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋಲಿನ ಹೊರತಾಗಿಯೂ ರವಿಶಾಸ್ತ್ರಿ ಅವರೇ ಕೋಚ್ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಯಸಿದ್ದಾರೆ.

Vijaya Karnataka Web 30 Jul 2019, 11:14 am
ಮುಂಬಯಿ: ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರನಾಗಿ ರವಿಶಾಸ್ತ್ರಿ ಅವರೇ ಮುಂದುವರಿಯುವಂತೆ ನಾಯಕ ವಿರಾಟ್ ಕೊಹ್ಲಿ ಬಯಸಿದ್ದಾರೆ.

ವೆಸ್ಟ್‌ಇಂಡೀಸ್ ಪ್ರವಾಸಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಕೇಳಿದಾಗ ವಿರಾಟ್ ತಮ್ಮ ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಈ ವಿಚಾರಕ್ಕೆಸಂಬಂಧಪಟ್ಟಂತೆ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಹಹಾ ಸಮಿತಿಯು ನನ್ನನ್ನು ಇದುವರೆಗೆ ಸಂಪರ್ಕಿಸಿಲ್ಲ. ಆದರೆ ನಾವೆಲ್ಲವೂ ರವಿ ಬಾಯ್ ಜತೆ ಉತ್ತಮ ಒಡನಾಟವನ್ನು ಹೊಂದಿದ್ದೇವೆ. ಅವರೇ ಕೋಚ್ ಆಗಿ ಮುಂದುವರಿಯಲು ಬಯಸುತ್ತೇವೆ. ಆದರೆ ನಾನೀಗಲೇ ಹೇಳಿರುವಂತೆಯೇ ಇದನ್ನು ಸಿಎಸಿ ನಿರ್ಧರಿಸಲಿದೆ ಎಂದು ಹೇಳಿದರು.

2017ರಲ್ಲಿ ಅನಿಲ್ ಕುಂಬ್ಳೆ ಜತೆಗಿನ ಭಿನ್ನಾಭಿಪ್ರಾಯದ ಬೆನ್ನಲ್ಲೇ ರವಿಶಾಸ್ತ್ರಿ ಪ್ರಧಾನ ಕೋಚ್ ಹುದ್ದೆಯನ್ನು ವಹಿಸುವಂತೆ ಕೊಹ್ಲಿ ಬಯಸಿದ್ದರು. ಅಲ್ಲದೆ ಶಾಸ್ತ್ರಿ ಆಯ್ಕೆಯಲ್ಲಿ ಕೊಹ್ಲಿ ಆಸಕ್ತಿಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿತ್ತು.

ಕಳೆದರೆಡು ವರ್ಷಗಳಲ್ಲಿ ಉತ್ತಮ ನಿರ್ವಹಣೆ ನೀಡಿರುವುದು ರವಿಶಾಸ್ತ್ರಿ ಅವರನ್ನೇ ಕೋಚ್ ಸ್ಥಾನದಲ್ಲೇ ಉಳಿಸುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌