ಆ್ಯಪ್ನಗರ

ಈಗ ಎಲ್ಲ ತಜ್ಞರು ಎಲ್ಲಿದ್ದಾರೆ: ಶಾಸ್ತ್ರಿ ಕಿಡಿ

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ದಾಖಲಾದ ಆರು ವಿಕೆಟುಗಳ ಅಂತರದ ಅಧಿಕಾರಯುತ ಗೆಲುವಿನ ಬಳಿಕ ಖಾರವಾಗಿ ಪ್ರತಿಕ್ರಿಯಿಸಿರುವ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ, ಈಗ ಎಲ್ಲ ತಜ್ಞರು ಎಲ್ಲಿದ್ದಾರೆ ಎಂದು ಟೀಕಿಸಿದ್ದಾರೆ.

TIMESOFINDIA.COM 3 Feb 2018, 11:56 am
ಡರ್ಬನ್: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ದಾಖಲಾದ ಆರು ವಿಕೆಟುಗಳ ಅಂತರದ ಅಧಿಕಾರಯುತ ಗೆಲುವಿನ ಬಳಿಕ ಖಾರವಾಗಿ ಪ್ರತಿಕ್ರಿಯಿಸಿರುವ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ, ಈಗ ಎಲ್ಲ ತಜ್ಞರು ಎಲ್ಲಿದ್ದಾರೆ ಎಂದು ಟೀಕಿಸಿದ್ದಾರೆ.
Vijaya Karnataka Web where are all the experts now thunders ravi shastri
ಈಗ ಎಲ್ಲ ತಜ್ಞರು ಎಲ್ಲಿದ್ದಾರೆ: ಶಾಸ್ತ್ರಿ ಕಿಡಿ


ಏಕದಿನ ಸರಣಿಗೂ ಮೊದಲು ನಡೆದ ಟೆಸ್ಟ್ ಸರಣಿಯಲ್ಲಿ ಭಾರತ 1-2ರ ಅಂತರದ ಸೋಲಿಗೆ ಒಳಗಾಯಿತು. ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಭಾರತ ಕೊನೆಗೂ ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಪ್ರತಿಷ್ಠೆ ಉಳಿಸಿಕೊಂಡಿತ್ತು.

ಇದೀಗ ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಭಾರತ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ.

ಟೆಸ್ಟ್ ಸರಣಿಯಲ್ಲಿ ಭಾರತದ ಪ್ರದರ್ಶನದ ಬಗ್ಗೆ ವ್ಯಾಪಕ ಟೀಕೆಗಳು ಎದುರಾಗಿದ್ದವು. ಇದರಿಂದಾಗಿ ವಿಮರ್ಶಕರ ವಿರುದ್ಧ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದೇ ಹೊತ್ತಿಗೆ ಟೆಸ್ಟ್ ಸರಣಿಯಲ್ಲಿ ಅಜಿಂಕ್ಯ ರಹಾನೆ ಜಾಗಕ್ಕೆ ರೋಹಿತ್ ಶರ್ಮಾ ಆಯ್ಕೆ ಮಾಡಿರುವುದನ್ನು ಶಾಸ್ತ್ರಿ ಮಗದೊಮ್ಮೆ ಸಮರ್ಥಿಸಿಕೊಂಡರು. ಸಮಕಾಲೀನ ಫಾರ್ಮ್ ಪರಿಗಣಿಸಿ ರೋಹಿತ್‌ಗೆ ಅವಕಾಶ ನೀಡಲಾಗಿತ್ತು ಎಂದರು.

ತಂಡದ ವ್ಯವಸ್ಥಾಪಕ ಮಂಡಳಿ ಸಂಪೂರ್ಣ ಅವಲೋಕನ ನಡೆಸಿದ ಬಳಿಕ ರಹಾನೆ ಹಾಗೂ ಭುವನೇಶ್ವರ್ ಕುಮಾರ್ ವಿಷಯದಲ್ಲಿ ಸೂಕ್ತ ನಿರ್ಧಾರವನ್ನು ಕೈಗೊಂಡಿತ್ತು ಎಂದು ವಿವರಿಸಿದರು.

ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ರಹಾನೆ ಉಪಯುಕ್ತ ಇನ್ನಿಂಗ್ಸ್ ಕಟ್ಟುವ ಮೂಲಕ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಮೊದಲ ಏಕದಿನ ಪಂದ್ಯದಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸಿಗಿಳಿಯುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌