ಆ್ಯಪ್ನಗರ

ಸರಣಿ ಗೆಲ್ಲಲು ನಮ್ಮ ಶ್ರೇಷ್ಠ ನಿರ್ವಹಣೆ ನೀಡಲಿದ್ದೇವೆ: ರಹಾನೆ

ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನಸು ಕಾಣುತ್ತಿರುವ ಟೀಮ್ ಇಂಡಿಯಾ ಇದೀಗ ಹೊಸ ವರ್ಷದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ.

TIMESOFINDIA.COM 27 Dec 2017, 5:08 pm
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನಸು ಕಾಣುತ್ತಿರುವ ಟೀಮ್ ಇಂಡಿಯಾ ಇದೀಗ ಹೊಸ ವರ್ಷದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ.
Vijaya Karnataka Web will do our best to win the series in south africa ajinkya rahane
ಸರಣಿ ಗೆಲ್ಲಲು ನಮ್ಮ ಶ್ರೇಷ್ಠ ನಿರ್ವಹಣೆ ನೀಡಲಿದ್ದೇವೆ: ರಹಾನೆ


ಇದರಂತೆ ಬಹುನಿರೀಕ್ಷಿತ ಆಫ್ರಿಕಾ ಪ್ರವಾಸಕ್ಕಿಂತಲೂ ಮುಂಚಿತವಾಗಿರುವ ಕಲಾತ್ಮಕ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ, ಹರಿಣಗಳನ್ನು ಮಣಿಸಲು ತಮ್ಮಿಂದಾಗುವ ಶ್ರೇಷ್ಠ ಪ್ರದರ್ಶನವನ್ನೇ ನೀಡಲಿದ್ದೇವೆ ಎಂದಿದ್ದಾರೆ.

ಕಳೆದ ಶ್ರೀಲಂಕಾ ಪ್ರವಾಸದಲ್ಲಿ ರಹಾನೆ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದರು. ಆದರೂ ವಿದೇಶದಲ್ಲಿ ಅತ್ಯುತ್ತಮ ಸರಾಸರಿ ಕಾಪಾಡಿಕೊಂಡಿರುವ ರಹಾನೆ ವೈಯಕ್ತಿಕವಾಗಿಯೂ ಉತ್ತಮ ನಿರ್ವಹಣೆ ನೀಡುವ ಆತ್ಮವಿಶ್ವಾಸದಲ್ಲಿದ್ದಾರೆ.

ಹೌದು, ಸರಣಿ ಗೆಲ್ಲುಲು ನಮ್ಮ ಶ್ರೇಷ್ಠ ನಿರ್ವಹಣೆ ನೀಡಲಿದ್ದೇವೆ. ಉತ್ತಮ ಕ್ರಿಕೆಟ್ ಆಡುವುದನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ಉತ್ತಮ ತಂಡವಾಗಿದ್ದು, ಅತ್ಯುತ್ತಮ ಬೌಲಿಂಗ್ ಪಡೆಯನ್ನು ಹೊಂದಿದೆ. ಹಾಗಾಗಿ ಯಾವುದನ್ನು ಹಗುರವಾಗಿ ಪರಿಗಣಿಸುತ್ತಿಲ್ಲ ಎಂದು ಸೇರಿಸಿದರು.

ಉಪನಾಯಕನಾಗಿ ಒತ್ತಡದ ಬಗ್ಗೆ ಕೇಳಿದಾಗ, ಜವಾಬ್ದಾರಿ ವಹಿಸುವುದು ನನಗಿಷ್ಟ. ಅದು ಬ್ಯಾಟಿಂಗ್ ಅಥವಾ ಫೀಲ್ಡಿಂಗ್ ಆಗಿರಬಹುದು ದೇಶಕ್ಕಾಗಿ ಸೇವೆ ಸಲ್ಲಿಸಲು ಅವಕಾಶ ದೊರಕಿರುವುದು ಶ್ರೇಷ್ಠ ಎಂದು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌