ಆ್ಯಪ್ನಗರ

ಕಾಶ್ಮೀರ 370ನೇ ವಿಧಿ ರದ್ದು; ಅಖ್ತರ್ ವಿವಾದಾತ್ಮಕ ಟ್ವೀಟ್

ಪಾಕಿಸ್ತಾನದ ನಾಯಕ ಸರ್ಫರಾಜ್ ಅಹ್ಮದ್ ಬೆನ್ನಲ್ಲೇ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್ ಸಹ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದಕ್ಕೆ ಭಾರತೀಯರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

Vijaya Karnataka Web 13 Aug 2019, 4:56 pm
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯ ರದ್ದು ಮಾಡಿರುವ ಭಾರತ ಸರಕಾರದ ಕ್ರಮವನ್ನು ಪಾಕಿಸ್ತಾನ ಬಲವಾಗಿ ಖಂಡಿಸಿದೆ.
Vijaya Karnataka Web shoiab-akhtar


ಭಾರತ ಸರಕಾರ ಕ್ರಮವನ್ನುವಿರೋಧಿಸಿದ ಪಾಕಿಸ್ತಾನ ಎಲ್ಲ ರೀತಿಯ ದ್ವಿಪಕ್ಷೀಯ ಬಾಂಧ್ಯವವನ್ನು ಕಂಡಿತುಕೊಂಡಿತು. ಇದಾದ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟಿಗರು ಭಾರತ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟಿದ್ದರು.

ಇದಕ್ಕೊಂದು ಸೇರ್ಪಡೆಯೆಂಬಂತೆ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್, ಈದ್ ಹಬ್ಬದ ಶುಭಾಶಯದ ವೇಳೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಕಾಶ್ಮೀರ ಜನತೆಗೆ ಸಂದೇಶವನ್ನು ನೀಡಿದ್ದಾರೆ.

ಕಾಶ್ಮೀರ ಬಲಿದಾನದ ವ್ಯಾಖ್ಯಾನ ಎಂದಿರುವ ಅಖ್ತರ್, ನಿಮ್ಮ ಸ್ವಾತಂತ್ರ್ಯಕ್ಕಾಗಿ ನಾವು ಪ್ರಾರ್ಥನೆ ಮಾಡುತ್ತೇವೆ. ಜೀವಿಸುವುದು ಎಷ್ಟೊಂದು ಒಳ್ಳೆಯ ಉದ್ದೇಶಕ್ಕಾಗಿ ಎಂದು ಉಲ್ಲೇಖಿಸಿದ್ದಾರೆ.

ಈ ಮೊದಲು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹ್ಮದ್, ಕಾಶ್ಮೀರ ವಿಚಾರದಲ್ಲಿ ಸಹ ತಗಾದೆ ಎತ್ತಿದ್ದರು.

ಕರಾಚಿಯಲ್ಲಿ ಈದ್ ಹಬ್ಬದ ಪ್ರಾರ್ಥನೆಯ ಬಳಿಕ ವರದಿಗಾರರೊಂದಿಗೆ ಮಾತನಾಡುತ್ತಾ, ನಮ್ಮ ಕಾಶ್ಮೀರಿ ಸಹೋದರರು ಈ ಕಠಿಣ ಪರಿಸ್ಥಿತಿಯಿಂದ ಪಾರಾಗಲು ಹಾಗೂ ನೆರವಾಗಲು ಸರ್ವಶಕ್ತನಾದ ಅಲ್ಲಾಹುವಿನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದರು.

ಸಂಪೂರ್ಣ ಪಾಕಿಸ್ತಾನ ಕಾಶ್ಮೀರ ಜನತೆಯ ಜತೆಗಿದ್ದು, ನಾವೆಲ್ಲರೂ ನೋವು ಹಾಗೂ ದು:ಖವನ್ನು ಸಮಾನವಾಗಿ ಹಂಚಿಕೊಳ್ಳುತ್ತೇವೆ ಎಂದಿದ್ದರು.

ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಆಫ್ರಿದಿ ಸಹ ಅಮೆರಿಕ ಅಧ್ಯಕ್ಷರ ಮಧ್ಯೆ ಪ್ರವೇಶಕ್ಕೆ ಬೇಡಿಕೆ ಮುಂದಿಟ್ಟಿದ್ದರು. ಇದಕ್ಕುತ್ತರವಾಗಿ ಭಾರತದ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್, ಕಾಶ್ಮೀರ ಸೇರಿದಂತೆ ಪಾಕ್ ಆಕ್ರಮಿತ ಕಾಶ್ಮೀರದ ಸಮಸ್ಯೆವನ್ನು ನಾವು ಬಗೆಹರಿಸಲಿದ್ದೇವೆ ಎಂದು ತಿರುಗೇಟು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌