ಆ್ಯಪ್ನಗರ

ಯುವಿ, ರೈನಾ ಭವಿಷ್ಯವೇನು ?

ಮುಂಬರುವ ಏಕದಿನ ವಿಶ್ವಕಪ್‌ಗಾಗಿನ ಭಾರತ ತಂಡದಿಂದ ಹಿರಿಯ ಅನುಭವಿ ಆಲ್‌ರೌಂಡರ್ ಆಟಗಾರರಾದ ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ಅವರನ್ನು ಕಡೆಗಣಿಸಲಾಗಿದೆ. ಇದರೊಂದಿಗೆ ನಿಕಟ ಭವಿಷ್ಯದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

Vijaya Karnataka Web 16 Apr 2019, 4:28 pm
ಹೊಸದಿಲ್ಲಿ: ಮುಂಬರುವ 2019 ಐಸಿಸಿ ಏಕದಿನ ವಿಶ್ವಕಪ್‌ಗಾಗಿನ ಟೀಮ್ ಇಂಡಿಯಾವನ್ನು ಆರಿಸಲಾಗಿದೆ. ಮಹೇಂದ್ರ ಸಿಂಗ್ ಧೋನಿ ಹೊರತುಪಡಿಸಿ ಹಳೆಯ ಆಟಗಾರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
Vijaya Karnataka Web yuvi-raina


ಇದರಲ್ಲಿ ಪ್ರಮುಖರಾಗಿರುವರು 2011 ಏಕದಿನ ವಿಶ್ವಕಪ್ ವಿಜೇತ ಹೀರೊ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ. 2007ರ ಚೊಚ್ಚಲ ಟ್ವೆಂಟಿ-20 ವಿಶ್ವಕಪ್‌ನಲ್ಲೂ ಯುವಿ ಹಾಗೂ ರೈನಾ ಮಹತ್ವದ ಪಾತ್ರ ವಹಿಸಿದ್ದರು.

ಬಹು ಕಾಲದಿಂದ ಭಾರತ ತಂಡದಿಂದ ಹೊರಗಟ್ಟಲ್ಪಟ್ಟಿರುವ ಯುವಿ ಹಾಗೂ ರೈನಾ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಕಠಿಣವೆನಿಸಿತ್ತು. ಇದೀಗ ನಿರೀಕ್ಷೆಯಂತೆಯೇ ಟೀಮ್ ಇಂಡಿಯಾದಿಂದ ಕಡೆಗಣಿಸಲಾಗಿದೆ.

ಇದರೊಂದಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಲ್ಲಿ ನಿರಾಸೆಯುಂಟಾಗಿದೆ. ಅತ್ತ ಯುವಿ ಹಾಗೂ ರೈನಾ ಅವರ ಮುಂಬರುವ ಭವಿಷ್ಯ ಏನೆಂಬುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಸದ್ಯ ಐಪಿಎಲ್ 2019ರಲ್ಲಿ ಆಡುತ್ತಿರುವ ಯುವಿ ಹಾಗೂ ರೈನಾ ನಿಕಟ ಭವಿಷ್ಯದಲ್ಲೇ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿರುವ ಯುವಿ ಹಾಗೂ ರೈನಾ ತಮ್ಮ ಅದ್ಭುತ ಫೀಲ್ಡಿಂಗ್, ಬೌಲಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಅಮೂಲ್ಯ ಕೊಡುಗೆಗಳನ್ನು ಸಲ್ಲಿಸುತ್ತಿದ್ದರು.

ಈಗಿನ ಭಾರತ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಯಾರು ಆಡಲಿದ್ದಾರೆಂಬುದು ಸಾಕಷ್ಟು ಗೊಂದಲಕ್ಕೀಡು ಮಾಡಿದೆ. ಆದರೆ ಯುವಿ ಹಾಗೂ ರೈನಾ ಆಡುತ್ತಿದ್ದಾಗ ಅಂತಹ ಯಾವುದೇ ಸಮಸ್ಯೆಗಳು ಇರುತ್ತಿರಲಿಲ್ಲ. ಇದೇ ಕಾರಣಕ್ಕಾಗಿ ಈಗಲೂ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌