ಆ್ಯಪ್ನಗರ

ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಶಿಪ್‌; ಕಂಚಿನ ಪದಕ ಗೆದ್ದ ಸಾಯ್ ಪ್ರಣೀತ್‌ ಐತಿಹಾಸಿಕ ಸಾಧನೆ

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್‌ ಪುರುಷ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಅಗ್ರ ಶ್ರೇಯಾಂಕಿತ ಚೀನಾದ ಕೆಂಟೊ ಮೊಮೊಟೊ ವಿರುದ್ಧ ಸೋಲಿಗೆ ಶರಣಾಗಿರುವ ಭಾರತದ ಸಾಯ್ ಪ್ರಣೀತ್ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

Vijaya Karnataka Web 24 Aug 2019, 9:46 pm
ಬಾಸೆಲ್: ಸ್ವಿಜರ್ಲೆಂಡ್‌ನಲ್ಲಿ ನಡೆಯುತ್ತಿರುವ ಬಿಡಬ್ಲ್ಯು ವಿಶ್ವ ಚಾಂಪಿಯನ್‌ಶಿಪ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಬಿ. ಸಾಯ್ ಪ್ರಣೀತ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.
Vijaya Karnataka Web sai-praneeth-01


ಇದಕ್ಕೂ ಮೊದಲು, ವಿಶ್ವ ಚಾಂಪಿಯನ್‌ಷಿಪ್‌ನ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಆಟಗಾರನೊಬ್ಬ ಕಂಚಿನ ಪದಕ ಗೆದ್ದಿದ್ದು 3 ದಶಕಗಳ ಹಿಂದೆ. 1983ರ ಆವೃತ್ತಿಯಲ್ಲಿ ದಿಗ್ಗಜ ಪ್ರಕಾಶ್‌ ಪಡುಕೋಣೆ ಕಂಚಿನ ಪದಕ ಗೆದ್ದ ಬಳಿಕ ಪುರುಷರ ಸಿಂಗಲ್ಸ್‌ನಲ್ಲಿ ಭಾರತೀಯರಾರ‍ಯರೂ ಪದಕದ ಬಳಿ ಸುಳಿದೇ ಇಲ್ಲ.

ಶನಿವಾರ ನಡೆದ ಪುರುಷರ ಸಿಂಗಲ್ಸ್‌ ಸೆಮಿಫೈನಲ್‌ ಪಂದ್ಯದಲ್ಲಿ ವಿಶ್ವದ ನಂಬರ್‌ ಒನ್‌ ಆಟಗಾರ ಜಪಾನ್‌ನ ಕೆಂಟೊ ಮೊಮೊಟೊ ಎದುರು 13-21, 8-21 ಗೇಮ್‌ಗಳಿಂದ ಸೋಲುವ ಮೂಲಕ ಪ್ರಣೀತ್‌ ಫೈನಲ್‌ಗೇರುವ ಅವಕಾಶ ಕಳೆದುಕೊಂಡರು. ಪ್ರಣೀತ್‌ ಅತ್ಯುತ್ತಮ ಪ್ರದರ್ಶನ ತೋರಿದರೂ, ವಿಶ್ವದ ಮುಂಚೂಣಿಯ ಆಟಗಾರನ ಮುಂದೆ ಅವರ ತಂತ್ರಗಳು ನಡೆಯಲಿಲ್ಲ.

ಪಂದ್ಯದ ಆರಂಭದಿಂದಲೇ ಅಗ್ರ ಶ್ರೇಯಾಂಕಿತ ಆಟಗಾರ ಸಾಯ್ ಮೇಲೆ ಅಧಿಪತ್ಯವನ್ನು ಸ್ಥಾಪಿಸಿದರು. ಇದರಿಂದಾಗಿ ಸಾಯ್‌ಗೆ ಪಂದ್ಯದಲ್ಲಿ ತಿರುಗಿ ಬೀಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಪಂದ್ಯದಲ್ಲಿ ಹಿನ್ನಡೆ ಅನುಭವಿಸಿದರು.

ಈ ಮುನ್ನ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಹೆಮ್ಮೆಯ ಪಿವಿ ಸಿಂಧೂ ಪ್ರಶಸ್ತಿ ಸುತ್ತಿಗೆ ಪ್ರವೇಶಿಸುವ ಮೂಲಕ ಸಾಧನೆ ಮೆರೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌