ಆ್ಯಪ್ನಗರ

ಚಾಂಪಿಯನ್ಸ್‌ ಟ್ರೋಫಿಗೆ ಭಾರತ ತಂಡ ಪ್ರಕಟ

ನೆದರ್ಲೆಂಡ್ಸ್‌ನಲ್ಲಿ ಜೂನ್‌ 23ರಿಂದ ನಡೆಯಲಿರು ಚಾಂಪಿಯನ್ಸ್‌ ಟ್ರೋಫಿ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ 18 ಮಂದಿ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಗುರುವಾರ ಬೆಂಗಳೂರಿನಲ್ಲಿ ಆಯ್ಕೆ ಮಾಡಲಾಯಿತು. ಗೋಲ್‌ಕೀಪರ್‌ ಶ್ರೀಜೇಶ್‌ ತಂಡವನ್ನು ಮುನ್ನಡೆಸಲಿದ್ದು, ಮಾಜಿ ನಾಯಕ ಸರ್ದಾರ್‌ ಸಿಂಗ್‌ ಹಾಗೂ ಬಿರೇಂದ್ರ ಲಾಕ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Vijaya Karnataka 1 Jun 2018, 10:18 am
ಬೆಂಗಳೂರು: ನೆದರ್ಲೆಂಡ್ಸ್‌ನಲ್ಲಿ ಜೂನ್‌ 23ರಿಂದ ನಡೆಯಲಿರು ಚಾಂಪಿಯನ್ಸ್‌ ಟ್ರೋಫಿ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ 18 ಮಂದಿ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಗುರುವಾರ ಬೆಂಗಳೂರಿನಲ್ಲಿ ಆಯ್ಕೆ ಮಾಡಲಾಯಿತು. ಗೋಲ್‌ಕೀಪರ್‌ ಶ್ರೀಜೇಶ್‌ ತಂಡವನ್ನು ಮುನ್ನಡೆಸಲಿದ್ದು, ಮಾಜಿ ನಾಯಕ ಸರ್ದಾರ್‌ ಸಿಂಗ್‌ ಹಾಗೂ ಬಿರೇಂದ್ರ ಲಾಕ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Vijaya Karnataka Web indian-hockey-team-13


ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಭಾರತ ತಂಡದಲ್ಲಿ ಸರ್ದಾರ್‌ ಸಿಂಗ್‌ ಸ್ಥಾನ ಪಡೆದಿರಲಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವ ಮೂಲಕ ಮತ್ತೆ ತಂಡದಲ್ಲಿ ಸ್ಥಾನ ಪಡೆದರು. ರೂಪಿಂದರ್‌ ಸಿಂಗ್‌, ಕೊತಾಜಿತ್‌ ಸಿಂಗ್‌ ಹಾಗೂ ಗುರ್ಜಿಂದರ್‌ ಸಿಂಗ್‌ ಅವರನ್ನು ಕೈ ಬಿಡಲಾಗಿದ್ದು, ಜರ್ಮನ್‌ಪ್ರೀತ್‌ ಸಿಂಗ್‌ ಮತ್ತು ಸುರೇಂದ್ರ ಕುಮಾರ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗೋಲ್‌ಕೀಪಿಂಗ್‌ನಲ್ಲಿ ಸೂರಜ್‌ ಕರ್ಕೇರಾ ಬದಲಿಗೆ ಕೃಷ್ಣ ಬಹದ್ದೂರ್‌ ಪಾಠಕ್‌ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಜೂನ್‌ 23ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ತಂಡದ ವಿವರ


ಗೋಲ್‌ಕೀಪರ್ಸ್‌: ಪಿ.ಆರ್‌. ಶ್ರೀಜೇಶ್‌ (ನಾಯಕ), ಕೃಷ್ಣ ಪಾಠಕ್‌.
ಡಿಫೆಂಡರ್ಸ್‌: ಹರ್ಮನ್‌ಪ್ರೀತ್‌ ಸಿಂಗ, ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಜರ್ಮನ್‌ಪ್ರೀತ್‌ ಸಿಂಗ್‌, ಬಿರೇಂದ್ರ ಲಾಕ್ರಾ ಮತ್ತು ಅಮಿತ್‌ ರೋಹಿದಾಸ್‌.
ಮಿಡ್‌ಫೀಲ್ಡರ್ಸ್‌: ಮನ್‌ಪ್ರೀತ್‌ ಸಿಂಗ್‌, ಚಿಂಗ್ಲೆನ್ಸನಾ ಸಿಂಗ್‌ ಕಂಗುಜಾಮ್‌ (ಉಪನಾಯಕ). ಸರ್ದಾರ್‌ ಸಿಂಗ್‌ ಮತ್ತು ವಿವೇಕ್‌ ಸಾಗರ್‌ ಪ್ರಸಾದ್‌.
ಫಾರ್ವರ್ಡ್ಸ್‌: ಎಸ್‌.ವಿ. ಸುನಿಲ್‌, ರಮಣ್‌ದೀಪ್‌ ಸಿಂಗ್‌, ಮನ್‌ದೀಪ್‌ ಸಿಂಗ್‌, ಸುಮಿತ್‌ ಕುಮಾರ್‌, ಆಕಾಶ್‌ದೀಪ್‌ ಸಿಂಗ್‌ ಮತ್ತು ದಿಲ್‌ಪ್ರೀತ್‌ ಸಿಂಗ್‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌