ಆ್ಯಪ್ನಗರ

ಡೆವಿಸ್‌ ಬಗ್ಗೆ ಸರಕಾರದ ಹಸ್ತಕ್ಷೇಪ ಇಲ್ಲ

ಸೆಪ್ಟೆಂಬರ್‌ 14ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಡೇವಿಸ್‌ ಕಪ್‌ ಟೆನಿಸ್‌ ಟೂರ್ನಿಯಲ್ಲಿ ಭಾರತ ತಂಡ ಪಾಲ್ಗೊಳ್ಳುವ ಕುರಿತು ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ.

Vijaya Karnataka 13 Aug 2019, 5:00 am
ಹೊಸದಿಲ್ಲಿ: ಸೆಪ್ಟೆಂಬರ್‌ 14ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಡೇವಿಸ್‌ ಕಪ್‌ ಟೆನಿಸ್‌ ಟೂರ್ನಿಯಲ್ಲಿ ಭಾರತ ತಂಡ ಪಾಲ್ಗೊಳ್ಳುವ ಕುರಿತು ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ.
Vijaya Karnataka Web govt wont have say on indias participation in davis cup tie in pak rijiju
ಡೆವಿಸ್‌ ಬಗ್ಗೆ ಸರಕಾರದ ಹಸ್ತಕ್ಷೇಪ ಇಲ್ಲ


ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿಯ ಸ್ಥಾನಮಾನ ವಾಪಸ್‌ ಪಡೆದುಕೊಂಡ ಬಳಿಕ ಭಾರತದೊಂದಿಗಿನ ಸಂಬಂಧವನ್ನು ಪಾಕ್‌ ಸರಕಾರ ಕಡಿದುಕೊಳ್ಳಲು ಮುಂದಾಗಿದೆ. ಇಂಥ ಸ್ಥಿತಿಯಲ್ಲಿ ಅಲ್ಲಿಗೆ ಹೋಗುವುದು ಕಷ್ಟ ಎಂದು ಭಾರತೀಯ ಟೆನಿಸ್‌ ಸಂಸ್ಥೆ ಅಭಿಪ್ರಾಯ ತಳೆದಿದ್ದು, ತಟಸ್ಥ ಜಾಗದಲ್ಲಿ ಟೂರ್ನಿ ಆಯೋಜಿಸುವಂತೆ ಅಂತಾರಾಷ್ಟ್ರೀಯ ಟೆನಿಸ್‌ ಒಕ್ಕೂಟಕ್ಕೆ ಮನವಿ ಮಾಡಿದೆ. ಇದರಿಂದ ಕುಪಿತಗೊಂಡ ಪಾಕಿಸ್ತಾನದ ಟೆನಿಸ್‌ ಒಕ್ಕೂಟ, ಅದು ಸಾಧ್ಯವಿಲ್ಲ ಎಂದಿದೆ. ಹೀಗಾಗಿ ಸಮಸ್ಯೆ ಬಿಗಡಾಯಿಸುತ್ತಲೇ ಹೋಗುತ್ತಿದೆ.

ಹೀಗಾಗಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕ್ರೀಡಾ ಸಚಿವರು ''ಅಂತಾರಾಷ್ಟ್ರೀಯ ಕ್ರೀಡಾ ಸಂಸ್ಥೆ ಟೂರ್ನಿ ಆಯೋಜಿಸುತ್ತಿದ್ದು, ದ್ವಿರಾಷ್ಟ್ರಗಳ ನಡುವಿನ ಟೂರ್ನಿಯಲ್ಲ. ಹೀಗಾಗಿ ಭಾರತ ತಂಡ ಪಾಲ್ಗೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌