ಆ್ಯಪ್ನಗರ

ಭಾರತ ಮೇಲಿನ ನಿಷೇಧ ತೆರವುಗೊಳಿಸಿದ ಐಒಸಿ

ಬಹುರಾಷ್ಟ್ರೀಯ ಕ್ರೀಡಾಕೂಟಗಳ ಆತಿಥ್ಯಕ್ಕೆ ಸಂಬಂಧಿಸಿದಂತೆ ಭಾರತ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತುರ್ತಾಗಿ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಈ ಸಂಬಂಧ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಪ್ರಕಟಣೆಯನ್ನು ಹೊರಡಿಸಿದೆ.

TOI.in 20 Jun 2019, 10:06 pm
ಹೊಸದಿಲ್ಲಿ: ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಕಾರ್ಯ ನಿರ್ವಾಹಕ ಮಂಡಳಿಯು ಗುರುವಾರದಂದು ಅಂತಾರಾಷ್ಟ್ರೀಯ ಕ್ರೀಡಾಕೂಟಗಳ ಆತಿಥ್ಯ ಹಕ್ಕಿಗೆ ಸಂಬಂಧಿಸಿದಂತೆ ಭಾರತ ಮೇಲೆ ವಿಧಿಸಲಾಗಿದ್ದ ಎಲ್ಲ ತಾತ್ಕಾಲಿಕ ನಿರ್ಬಂಧಗಳನ್ನು ತುರ್ತಾಗಿ ಜಾರಿಗೆ ಬರುವಂತೆ ತೆರವುಗೊಳಿಸಿದೆ.
Vijaya Karnataka Web ioc


ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಗಟ್ಟಿಸಿಕೊಂಡ ಕ್ರೀಡಾಪಟುಗಳಿಗೆ ದೇಶದಲ್ಲಿ ನಡೆಯುವ ಬಹುರಾಷ್ಟ್ರೀಯ ಟೂರ್ನಿಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಡಲಾಗುವುದು ಎಂಬ ಭಾರತ ಸರಕಾರದ ಲಿಖಿತ ಭರವಸೆಯ ಮೆರೆಗೆ ಭಾರತೀಯ ಒಲಿಂಪಿಕ್ ಸಮಿತಿ (ಐಒಸಿ) ಮೇಲೆ ವಿಧಿಸಲಾದ ತಾತ್ಕಾಲಿಕ ನಿಷೇಧವನ್ನು ಐಒಎ ತೆರವುಗೊಳಿಸಿದೆ.

ಪುಲ್ವಾಮಾ ಉಗ್ರರ ದಾಳಿಯ ಬೆನ್ನಲ್ಲೇ ಫೆಬ್ರವರಿನಲ್ಲಿ ನಡೆದ ಶೂಟಿಂಗ್ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಲಾಗಿತ್ತು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಭಾರತ ಮೇಲೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು.

ಸದ್ಯ ಪ್ರಸ್ತುತ ವಿವಾದವನ್ನು ಇತ್ಯರ್ಥಗೊಳಿಸಲು ಪರಿಶ್ರಮಿಸಿರುವ ಭಾರತ ಸರಕಾರ ಹಾಗೂ ಐಒಎಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಧನ್ಯವಾದಗಳನ್ನು ಸಲ್ಲಿಸಿದೆ.

ಏತನ್ಮಧ್ಯೆ ಭಾರತದಲ್ಲಿ ನಡೆಯಬೇಕಾಗಿದ್ದ ಏಷ್ಯನ್ ಜೂನಿಯರ್ ರೆಸ್ಲಿಂಗ್ ಟೂರ್ನಿಯನ್ನು ವಿಶ್ವ ರೆಸ್ಲಿಂಗ್ ಮಂಡಳಿಯು ಸ್ಥಳಾಂತರಗೊಳಿಸಿತ್ತು. ಬೆನ್ನಲ್ಲೇ ಜೂನಿಯರ್ ಡೇವಿಸ್ ಕಪ್ ಹಾಗೂ ಫೆಡ್ ಕಪ್ ಆತಿಥ್ಯವು ನಷ್ಟವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌