ಆ್ಯಪ್ನಗರ

ರಾಜ್ಯ ಸರಕಾರದಿಂದ ಅಶ್ವಿನಿಗೆ 33 ಲಕ್ಷ ರೂ. ಬಹುಮಾನ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 21ನೇ ಕಾಮನ್‌ವೆಲ್ತ್ ಗೇಮ್ಸ್‌ನ ಬ್ಯಾಡ್ಮಿಂಟನ್ ಕ್ರೀಡೆಯ ಮಿಶ್ರ ಟೀಂ ವಿಭಾಗದಲ್ಲಿ ಚಿನ್ನ ಹಾಗೂ ಮಹಿಳಾ ಡಬಲ್ಸ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಅಶ್ವಿನಿ ಪೊನ್ನಪ್ಪ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಅವರು 33 ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಿದರು.

Vijaya Karnataka Web 26 Jul 2018, 3:15 pm
ಬೆಂಗಳೂರು: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 21ನೇ ಕಾಮನ್‌ವೆಲ್ತ್ ಗೇಮ್ಸ್‌ನ ಬ್ಯಾಡ್ಮಿಂಟನ್ ಕ್ರೀಡೆಯ ಮಿಶ್ರ ಟೀಂ ವಿಭಾಗದಲ್ಲಿ ಚಿನ್ನ ಹಾಗೂ ಮಹಿಳಾ ಡಬಲ್ಸ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಅಶ್ವಿನಿ ಪೊನ್ನಪ್ಪ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಅವರು 33 ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಿದರು.
Vijaya Karnataka Web ashwini-ponnappa-08.


ವಿಧಾನಸೌಧ ಕಚೇರಿಯಲ್ಲಿ ಅಶ್ವಿನಿ‌ ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು.


ಬಳಿಕ ಮಾಧ್ಯಮದೊಂದಿಗೆ ಮಾತ‌ನಾಡಿದ ಅವರು, ಕಾಮನ್‌ವೆಲ್ತ್ ಗೇಮ್‌ನ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಅಶ್ವಿನಿ ‌ಪೊನ್ನಪ್ಪ ಅವರಿಗೆ 25 ಲಕ್ಷ ರೂ. ಹಾಗೂ ಕಂಚಿಗೆ 8 ಲಕ್ಷ ರೂ. ಪುರಸ್ಕಾರ ನೀಡಲಾಗಿದೆ. ನಮ್ಮ ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತಂದಿರುವ ಅಶ್ವಿನಿ‌ ಪೊನ್ನಪ್ಪ ಅವರಿಗೆ ಅಭಿನಂದನೆ. ಒಲಂಪಿಕ್ಸ್‌ಗಾಗಿ ತಯಾರಿ ನಡೆಸುತ್ತಿರುವ ಇವರು, ಚಿನ್ನ‌ ಗೆಲ್ಲುವ‌ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿ‌ ಎಂದು ಆಶಿಸಿದರು.

ಒಲಂಪಿಕ್ಸ್‌ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂ. ಹಾಗೂ ಬೆಳ್ಳಿಗೆ 3 ಕೋಟಿ ರೂ. ಮತ್ತು ಕಂಚು ಗೆದ್ದರೆ 2 ಕೋಟಿ‌ ರು. ನೀಡುವುದಾಗಿ ಸರಕಾರ ಘೋಷಿಸಿದೆ ಎಂಬುದನ್ನು ಡಿಸಿಎಂ ಉಲ್ಲೇಖಿಸಿದರು.


ನೇರ ನೇಮಕಾತಿ...
ಕ್ರೀಡಾಪಟುಗಳಿಗೆ ಪೊಲೀಸ್‌ ಇಲಾಖೆಯಲ್ಲಿ‌ ನೇರ ನೇಮಕಾತಿ ಮಾಡಿಕೊಳ್ಳುವ‌ ಸಂಬಂಧ ಸಿಆ್ಯಂಡ್‌ಆರ್ ನಿಯಮದಲ್ಲಿ‌ ಬದಲಾವಣೆ ತಂದು‌ ಹಿಂದಿನ‌ ಪದ್ಧತಿ‌ ಮುಂದುವರೆಸುವುದಾಗಿ ಪರಮೇಶ್ವರ್ ಹೇಳಿದರು. ಈ ಮೊದಲು ಕ್ರೀಡಾಪಟುಗಳನ್ನು‌ ನೇರ ನೇಮಕಾತಿ‌ ಮಾಡಿಕೊಳ್ಳಲಾಗುತ್ತಿತ್ತು. ಈಗ ಈ ನೇರ ನೇಮಕಾತಿ ಇಲ್ಲ. ಹೀಗಾಗಿ ನಿಯಮಕ್ಕೆ ಬದಲಾವಣೆ ತಂದು‌ ನೇರ ನೇಮಕಾತಿಗೆ ಅವಕಾಶ ನೀಡಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌