ಆ್ಯಪ್ನಗರ

ಖೇಲೋ ಇಂಡಿಯಾ 2022: ಮೊದಲ ದಿನವೇ ಮನಸೂರೆಗೊಂಡ ಮಲ್ಲಕಂಬ

"ವಿಶ್ವ ಯೂನಿವರ್ಸಿಟಿ ಗೇಮ್ಸ್‌ಗೆ ತಂಡಗಳನ್ನು ಕಳುಹಿಸಲು ಮೇ 22 ಕೊನೆಯ ದಿನಾಂಕವಾಗಿರುತ್ತದೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಮೇ 3 ರಂದು ಕೊನೆಗೊಳ್ಳುತ್ತದೆ. ಕೆಲವು ಅಥ್ಲೀಟ್‌ಗಳು ರಾಷ್ಟ್ರೀಯ ಕ್ಯಾಂಪ್‌ನಲ್ಲಿ ಇದ್ದ ಕಾರಣ ಯೂನಿವರ್ಸಿಟಿ ರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಅದ್ದರಿಂದ ಬೆಂಗಳೂರಿನಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಮತ್ತು ಕೆಲ ದಿನಗಳ ಹಿಂದೆ ನಡೆದ ಫೆಡರೇಷನ್‌ ಕಪ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಸಾಧನೆಗಳನ್ನು ಪರಿಗಣಿಸಲಾಗುವುದು," ಎಂದು ಡಾ. ಬೀನು ಜಾರ್ಜ್‌ ವರ್ಗೀಸ್‌ ಹೇಳಿದ್ದರು

Authored byವಿಜೇತ್ ಕುಮಾರ್ | Vijaya Karnataka Web 24 Apr 2022, 1:58 am

ಹೈಲೈಟ್ಸ್‌:

  • ಉದ್ಯಾನ ನಗರಿ ಬೆಂಗಳೂರಿನಲ್ಲಿ ಆಯೋಜನೆ ಆಗಲಿರುವ ಖೇಲೋ ಇಂಡಿಯಾ ಗೇಮ್ಸ್‌.
  • ಏಪ್ರಿಲ್‌ 24 ರಿಂದ ಮೇ 3ರವರೆಗೆ ಬೆಂಗಳೂರಿನ ಐದು ಕ್ರೀಡಾಂಗಣಗಳಲ್ಲಿ ವಿವಿಧ ಕ್ರೀಡಾಕೂಟ.
  • ಮೊದಲ ದಿನವೇ ಮಿಂಚಿದ ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾಪಟುಗಳು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Malakamba 2022
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಮಲ್ಲಕಂಬ ಕ್ರೀಡಾಪಟುಗಳು (ಚಿತ್ರ: ವಿಕ ವೆಬ್).
ಬೆಂಗಳೂರು: ಜೈನ್‌ ಗ್ಲೋಬಲ್‌ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಉದ್ಘಾಟನಾ ಮುಂಚಿತವಾಗಿ ನಡೆದ ದೇಶೀಯ ಕ್ರೀಡೆ ಮಲ್ಲಕಂಬ ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು. ಎಂ.ಜಿ. ವಿಶ್ವವಿದ್ಯಾನಿಲಯ ವಾಲಿಬಾಲ್‌ ಮತ್ತು ಬಾಸ್ಕೆಟ್‌ಬಾಲ್‌ನಲ್ಲಿ ಪ್ರಭುತ್ವ ಸಾಧಿಸಿತು.
ಕೊಟ್ಟಾಯಂನ ಎಂ.ಜಿ. ಯೂನಿವರ್ಸಿಟಿ ಕ್ಯಾಲಿಕಟ್‌ ಯೂನಿವರ್ಸಿಟಿ ವುರುದ್ಧದ ಲೀಗ್‌ ಪಂದ್ಯದಲ್ಲಿ ಜಯ ಗಳಿಸಿ ಪ್ರಭುತ್ವ ಸಾಧಿಸಿತು. ಕ್ಯಾಲಿಕಟ್‌ ಯೂನಿವರ್ಸಿಟಿ ಈ ಬಾರಿಯ ಆಲ್‌ ಇಂಡಿಯಾ ಯೂನಿವರ್ಸಿಟಿ ಚಾಂಪಿಯನ್‌ ಪಟ್ಟ ಗೆದ್ದಿರುವ ತಂಡವಾಗಿದೆ. ಉತ್ತಮ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ಎಂ.ಜಿ. ಯೂನಿವರ್ಸಿಟಿ 25-11, 25-17, 25-23 ಅಂತರದಲ್ಲಿ ಜಯ ಗಳಿಸಿ ಮೊದಲ ದಿನದಲ್ಲಿ ಶುಭಾರಂಭ ಕಂಡಿತು.

ವನಿತೆಯರ ಬ್ಯಾಡ್ಮಿಂಟನ್‌ನಲ್ಲೂ ಕುತೂಹಲದ ಪಂದ್ಯಗಳು ಪ್ರೇಕ್ಷಕರನ್ನು ರಂಜಿಸಿದವು. ಓಸ್ಮಾನಿಯ ಯೂನಿವರ್ಸಿಟಿಯು ಸಾವಿತ್ರಿ ಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯದ ವಿರುದ್ಧ 2-1 ಅಂತರದಲ್ಲಿ ಜಯ ಗಳಿಸಿತು.

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ತಂತ್ರಜ್ಞಾನದ ಸ್ಪರ್ಷ!

23 ವರ್ಷದ ವೈಷ್ಣವಿ ಸಿಂಗಲ್ಸ್‌ನಲ್ಲಿ ಮೃನ್ಮಯಿ ದೇಶಪಾಂಡೆ ವಿರುದ್ಧ ಸೋಲನುಭವಿಸುವುದರೊಂದಿಗೆ ಸಾವಿತ್ರಿ ಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯ ಮುನ್ನಡೆ ಕಂಡಿತು. ನಂತರದ ಡಬಲ್ಸ್‌ ಮತ್ತು ಸಿಂಗಲ್ಸ್‌ ಪಂದ್ಯಗಳಲ್ಲಿ ಓಸ್ಮಾನಿಯಾ ವಿವಿ ಜಯ ಗಳಿಸಿ ಪಂದ್ಯ ತನ್ನದಾಗಿಸಿಕೊಂಡಿತು.

ಶ್ರೀಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬಾಸ್ಕೆಟ್‌ಬಾಲ್‌ ಪಂದ್ಯದಲ್ಲಿ ಮದ್ರಾಸ್‌ ಯೂನಿವರ್ಸಿಟಿಯು 88-68 ಅಂತರದಲ್ಲಿ ಗುರುನಾನಕ್‌ ದೇವ್‌ ವಿಶ್ವವಿದ್ಯಾನಿಲಯದ ವಿರುದ್ಧ ಜಯ ಗಳಿಸಿತು. ಮದ್ರಾಸ್‌ ಯೂನಿವರ್ಸಿಟಿಯ ಪುರುಷರ ತಂಡವು ಕುರುಕ್ಷೇತ್ರ ವಿವಿ ವಿರುದ್ಧ ಸೋಲನುಭವಿಸಿತು.

ವಾಲಿಬಾಲ್‌ ಕ್ರೀಡೆಯ ಒಂದು ನೋಟ (ಚಿತ್ರ: ವಿಕ).


ಖೇಲೋ ಇಂಡಿಯಾದಿಂದ ವಿಶ್ವ ಯೂನಿವರ್ಸಿಟಿ ಗೇಮ್ಸ್‌ಗೆ ಅವಕಾಶ
ರಾಷ್ಟ್ರೀಯ ಶಿಬಿರದಲ್ಲಿದ್ದು ಕರ್ನಾಟಕದ ಮೂಡಬಿದಿರೆಯಲ್ಲಿ ನಡೆದ ಪುರಷರ ಅಂತರ್‌ ವಿಶ್ವವಿದ್ಯಾನಿಲಯ ಹಾಗೂ ಭುವನೇಶ್ವರದಲ್ಲಿ ನಡೆದ ವನಿತೆಯರ ಅಂತರ್‌ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವಲ್ಲಿ ವಿಫಲರಾದ ಅಥ್ಲೀಟ್‌ಗಳಿಗೆ ಜೂನ್‌ ತಿಂಗಳಲ್ಲಿ ಚೀನಾದಲ್ಲಿ ನಡೆಯಲಿರುವ ವಿಶ್ವ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಇನ್ನೊಂದು ಅವಕಾಶ ಸಿಕ್ಕಿದೆ.

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌: ಅಥ್ಲೆಟಿಕ್ಸ್‌ನಲ್ಲಿ ಮಂಗಳೂರು ವಿವಿ ಪ್ರಭುತ್ವ!

ಬೆಂಗಳೂರಿನಲ್ಲಿ ಇದೇ ತಿಂಗಳ 24 ರಿಂದ ಮೇ 3 ರವರೆಗೆ ನಡೆಯಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಪಾಲ್ಗೊಂಡು ಪದಕ ಗೆದ್ದವರು ವಿಶ್ವ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಪಾಲ್ಗೊಳ್ಳಬಹುದು ಎಂದು ಅಖಿಲ ಭಾರತ ವಿಶ್ವವಿದ್ಯಾನಿಲಯ ಆಯ್ಕೆ ಸಮಿತಿ ಅಧ್ಯಕ್ಷ ಡಾ. ಬಿನು ಜಾರ್ಜ್‌ ವರ್ಗೀಸ್‌ ಹೇಳಿದ್ದರು.

ವಿಶ್ವ ಯೂನಿವರ್ಸಿಟಿ ಗೇಮ್ಸ್‌ ಚೀನಾದ ಚಿಂಗ್ಡುವಿಲ್ಲಿ ಜೂನ್‌ 22 ರಿಂದ ಜುಲೈ 7, 2022ರ ವರೆಗೆ ನಡೆಯಲಿದೆ. ಅಖಿಲ ಭಾರತ ವಿಶ್ವವಿದ್ಯಾಲಯಗಳ ಒಕ್ಕೂಟ (ಎಐಯು) ಈ ಮೊದಲು ವಿಶ್ವವಿದ್ಯಾನಿಲಯಗಳ ರಾಷ್ಟ್ರೀಯ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಹೇಳಿಕೆ ನೀಡಿತ್ತು, ಆದರೆ ಈಗ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡವನ್ನು ಆಯ್ಕೆ ಮಾಡುವಾಗ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಹಾಗೂ ಫೆಡರೇಷನ್‌ ಕಪ್‌ನಲ್ಲಿ ತೋರಿದ ಸಾಧನೆಗಳನ್ನು ಪರಿಗಣಿಸಲಾಗುವುದು ಎಂದಿದ್ದರು.
ಲೇಖಕರ ಬಗ್ಗೆ
ವಿಜೇತ್ ಕುಮಾರ್
ವಿಜಯ ಕರ್ನಾಟಕ ವೆಬ್‌ನಲ್ಲಿ ಕ್ರೀಡಾ ವಿಭಾಗದ ಪತ್ರಕರ್ತರಾಗಿ 2019ರಿಂದ ಸೇವೆಯಲ್ಲಿದ್ದಾರೆ. ಇದಕ್ಕೂ ಮುನ್ನ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಂಜೆ ವಾಣಿ ಮತ್ತು ಒನ್‌ ಇಂಡಿಯಾ ಸಂಸ್ಥೆಗಳಲ್ಲಿ ಟೆಕ್‌, ಆಟೊಮೊಬೈಲ್ಸ್‌, ರಾಜಕೀಯ, ಸಿನಿಮಾ ಮತ್ತು ವಾಣಿಜ್ಯ ಕ್ಷೇತ್ರಗಳ ಬಗ್ಗೆ ವರದಿ ಮಾಡಿದ ಅನುಭವ ಹೊಂದಿದ್ದು, ಟೆನಿಸ್‌, ಬ್ಯಾಡ್ಮಿಂಟನ್‌ ಮತ್ತು ಕ್ರಿಕೆಟ್‌ ಇವರ ಅಚ್ಚುಮೆಚ್ಚಿನ ಕ್ರೀಡೆಗಳು. ಪವರ್‌ಲಿಫ್ಟಿಂಗ್ ಇವರ ಹೊಸ ಪ್ರವೃತ್ತಿ, ವ್ಯಾಯಾಮ, ಸಾಹಿತ್ಯ ಓದು, ಪ್ರವಾಸ, ಬೈಕಿಂಗ್‌ ಹಾಗೂ ಚಾರಣ ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌