ಕ್ರೀಡಾ ಪ್ರತಿಭೆಗಳ ಅನ್ವೇಷಣೆಗೆ ರಾಷ್ಟ್ರಪತಿ ಕರೆ
ದೇಶದ ಮೂಲೆ ಮೂಲೆಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವಾಗಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
Vijaya Karnataka 21 Jun 2019, 5:00 am
ಹೊಸದಿಲ್ಲಿ: ದೇಶದ ಮೂಲೆ ಮೂಲೆಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವಾಗಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ಗುರುವಾರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು 'ಖೇಲೋ ಇಂಡಿಯಾ' ಯೋಜನೆ ದೇಶದೆಲ್ಲೆಡೆ ವ್ಯಾಪಿಸುವಂತೆ ಮಾಡಿ, ದೇಶವನ್ನು ಕ್ರೀಡಾ ಜಗತ್ತಿನ ಶಕ್ತಿಕೇಂದ್ರವನ್ನಾಗಿ ರೂಪಿಸಬೇಕು,'' ಎಂದರು.
''ಜಾಗತಿಕ ಮಟ್ಟದಲ್ಲಿ ದೇಶದ ಕ್ರೀಡಾಪಟುಗಳು ಮಿಂಚುವಂತೆ ಮಾಡಬೇಕು. ಯುವ ಜನಾಂಗದಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿ, ಆರೋಗ್ಯಕರ ಜೀವನಕ್ಕೆ ಪ್ರೇರಣೆ ನೀಡಿ,'' ಎಂದ ಅವರು ''ಕ್ರೀಡೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳ ವೃದ್ಧಿಗೆ ಗಮನಹರಿಸಬೇಕು,'' ಎಂದರು.
ಗುರುವಾರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು 'ಖೇಲೋ ಇಂಡಿಯಾ' ಯೋಜನೆ ದೇಶದೆಲ್ಲೆಡೆ ವ್ಯಾಪಿಸುವಂತೆ ಮಾಡಿ, ದೇಶವನ್ನು ಕ್ರೀಡಾ ಜಗತ್ತಿನ ಶಕ್ತಿಕೇಂದ್ರವನ್ನಾಗಿ ರೂಪಿಸಬೇಕು,'' ಎಂದರು.
''ಜಾಗತಿಕ ಮಟ್ಟದಲ್ಲಿ ದೇಶದ ಕ್ರೀಡಾಪಟುಗಳು ಮಿಂಚುವಂತೆ ಮಾಡಬೇಕು. ಯುವ ಜನಾಂಗದಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿ, ಆರೋಗ್ಯಕರ ಜೀವನಕ್ಕೆ ಪ್ರೇರಣೆ ನೀಡಿ,'' ಎಂದ ಅವರು ''ಕ್ರೀಡೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳ ವೃದ್ಧಿಗೆ ಗಮನಹರಿಸಬೇಕು,'' ಎಂದರು.