ಆ್ಯಪ್ನಗರ

ಏಷ್ಯಾಡ್‌ ಸಾಧಕರಿಗೆ ಮೋದಿ ಅಭಿನಂದನೆ; ಒಲಿಂಪಿಕ್ಸ್‌ನತ್ತ ಚಿತ್ತ ಹರಿಸಲು ಸಲಹೆ

ಇಂಡೊನೇಷ್ಯಾದಲ್ಲಿ ಇತ್ತೀಚೆಗೆ ನಡೆದ 18ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಅಥ್ಲೀಟ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ, ಕಠಿಣ ಸ್ಪರ್ಧೆಗಳಿರುವ ಒಲಿಂಪಿಕ್ಸ್‌ನಂತಹ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಯಶಸ್ಸು ಗಳಿಸುವುದಕ್ಕಾಗಿ ಇಂದಿನಿಂದಲೇ ಇನ್ನಷ್ಟು ಶ್ರಮ ಹಾಕಿ ಅಭ್ಯಾಸ ಆರಂಭಿಸಿ ಎಂದು ಕರೆ ನೀಡಿದ್ದಾರೆ.

Vijaya Karnataka 6 Sep 2018, 10:15 am
ಹೊಸದಿಲ್ಲಿ: ಇಂಡೊನೇಷ್ಯಾದಲ್ಲಿ ಇತ್ತೀಚೆಗೆ ನಡೆದ 18ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಅಥ್ಲೀಟ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ, ಕಠಿಣ ಸ್ಪರ್ಧೆಗಳಿರುವ ಒಲಿಂಪಿಕ್ಸ್‌ನಂತಹ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಯಶಸ್ಸು ಗಳಿಸುವುದಕ್ಕಾಗಿ ಇಂದಿನಿಂದಲೇ ಇನ್ನಷ್ಟು ಶ್ರಮ ಹಾಕಿ ಅಭ್ಯಾಸ ಆರಂಭಿಸಿ ಎಂದು ಕರೆ ನೀಡಿದ್ದಾರೆ.
Vijaya Karnataka Web modi asian games winners


ದಿಲ್ಲಿಯ ತಮ್ಮ ನಿವಾಸದಲ್ಲಿ ಬುಧವಾರ ಅಥ್ಲೀಟ್‌ಗಳೊಂದಿಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡ ಪ್ರಧಾನಿಯವರು, ''ಏಷ್ಯಾಡ್‌ನಲ್ಲಿನ ಆದರ್ಶಪ್ರಾಯ ಸಾಧನೆ ಭಾರತದ ಘನತೆ ಮತ್ತು ಗೌರವಗಳನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದಿದೆ. ಸಣ್ಣ ಪಟ್ಟಣಗಳು, ಗ್ರಾಮೀಣ ಪ್ರದೇಶಗಳು, ಜತೆಗೆ ಬಡ ಕುಟುಂಬದ ಅಥ್ಲೀಟ್‌ಗಳ ಸಾಧನೆ ನೋಡಿದರೆ ಹೃದಯ ತುಂಬಿ ಬರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ನಿಜವಾಗಿಯೂ ಪ್ರತಿಭಾವಂತ ಅಥ್ಲೀಟ್‌ಗಳಿದ್ದಾರೆ. ಅಂತಹ ಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿಸುವ ಅಗತ್ಯವಿದೆ. ಕ್ರೀಡಾಪಟುಗಳು ಎಷ್ಟು ಕಷ್ಟ ಪಡುತ್ತಿದ್ದಾರೆ ಎಂಬುದು ಹೊರಜಗತ್ತಿಗೆ ತಿಳಿದಿಲ್ಲ,'' ಎಂದರು.

ಪ್ರದರ್ಶನದ ಗುಣಮಟ್ಟ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವಂತೆಯೂ ಕ್ರೀಡಾಪಟುಗಳಿಗೆ ಪ್ರಧಾನಿ ಇದೇ ವೇಳೆ ಕರೆ ಕೊಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌