ಆ್ಯಪ್ನಗರ

ಐಒಎ ಮೇಲಿನ ಅಮಾನತು ಹಿಂಪಡೆದ ಕ್ರೀಡಾ ಸಚಿವಾಲಯ

ಕಳಂಕಿತರಾದ ಸುರೇಶ್ ಕಲ್ಮಾಡಿ ಮತ್ತು ಅಭಯ್ ಸಿಂಗ್ ಚೌಟಾಲಾ ಅವರಿಗೆ ನೀಡಿರುವ ಅಜೀವ ಅಧ್ಯಕ್ಷ ಸ್ಥಾನವನ್ನು ರದ್ದುಗೊಳಿಸಿರುವ ಹಿನ್ನಲೆಯಲ್ಲಿ ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯವು ಹಿಂಪಡೆದಿದೆ.

ಟೈಮ್ಸ್ ಆಫ್ ಇಂಡಿಯಾ 13 Jan 2017, 8:03 pm
ಹೊಸದಿಲ್ಲಿ: ಕಳಂಕಿತರಾದ ಸುರೇಶ್ ಕಲ್ಮಾಡಿ ಮತ್ತು ಅಭಯ್ ಸಿಂಗ್ ಚೌಟಾಲಾ ಅವರಿಗೆ ನೀಡಿರುವ ಅಜೀವ ಅಧ್ಯಕ್ಷ ಸ್ಥಾನವನ್ನು ರದ್ದುಗೊಳಿಸಿರುವ ಹಿನ್ನಲೆಯಲ್ಲಿ ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯವು ಹಿಂಪಡೆದಿದೆ.
Vijaya Karnataka Web sports ministry revokes suspension of ioa
ಐಒಎ ಮೇಲಿನ ಅಮಾನತು ಹಿಂಪಡೆದ ಕ್ರೀಡಾ ಸಚಿವಾಲಯ


ಭಾರತೀಯ ಒಲಿಂಪಿಕ್ ಸಂಸ್ಥೆಯ ಅಜೀವ ಅಧ್ಯಕ್ಷ ಸ್ಥಾನಕ್ಕೆ ಭ್ರಷ್ಟ ಸುರೇಶ್ ಕಲ್ಮಾಡಿ ಹಾಗೂ ಅಭಯ್ ಸಿಂಗ್ ಅವರನ್ನು ನೇಮಕಗೊಳಿಸಿರುವುದು ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಇದಾದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದ ಕ್ರೀಡಾ ಸಚಿವಾಲಯವು ಐಒಎ ಮೇಲೆ ನಿಷೇಧವನ್ನು ಹೇರಿತ್ತು.

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಐಒಎ ಅಮಾನತು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕೂ ಮೊದಲು ಡಿಸೆಂಬರ್ 30ರಂದು ಐಒಎ ಮಾನ್ಯತೆ ಮೇಲೆ ಕ್ರೀಡಾ ಸಚಿವಾಲಯವು ನಿಷೇಧ ಹೇರಿತ್ತು.

ಈ ಎಲ್ಲ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕ್ರೀಡಾ ಸಚಿವಾಲಯ, ದೇಶದ ಕ್ರೀಡೆಯ ಅಭಿವೃದ್ಧಿ ಹಾಗೂ ಪ್ರಚಾರದಲ್ಲಿ ವಿಶೇಷ ನಿಗಾ ವಹಿಸಲಿದೆ. ಹಾಗೆಯೇ ಭವಿಷ್ಯದಲ್ಲೂ ಉನ್ನತ ಮಟ್ಟದ ಪ್ರಾಮಾಣಿಕತೆ ಹಾಗೂ ನೈತಿಕತೆ ಎತ್ತಿ ಹಿಡಿಯುವಂತೆ ಸಂಸ್ಥೆಯನ್ನು ಎಚ್ಚರಿಸಿದೆ.

ಅದೇ ಹೊತ್ತಿಗೆ ನಿರ್ಧಾರವನ್ನು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಎನ್ ರಾಮಚಂದ್ರನ್ ಸ್ವಾಗತಿಸಿದ್ದಾರೆ. ಅಮಾನತು ಅಳಿಸಿ ಹಾಕಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಭಾರತೀಯ ಕ್ರೀಡಾ ಸಚಿವಾಲಯಕ್ಕೆ ಧನ್ಯವಾದವನ್ನು ಸಮರ್ಪಿಸುತ್ತಿದ್ದೇವೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌