ಆ್ಯಪ್ನಗರ

ಮಹಿಳಾ ಕ್ರೀಡಾಪಟುಗಳ ಮೇಲೆ ಹಲ್ಲೆ ವರದಿ ಸಲ್ಲಿಕೆಗೆ ಸಚಿವೆ ಉಮಾಶ್ರೀ ಸೂಚನೆ

ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಅಫ್‌ ಇಂಡಿಯಾ ನವದೆಹಲಿಯಲ್ಲಿ ಏರ್ಪಡಿಸಿದ್ದ 17 ವರ್ಷದೊಳಗಿನ ಥ್ರೋಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡದ ಮಹಿಳಾ ಕ್ರೀಡಾಪಟುಗಳ ಮೇಲೆ ನಡೆದಿರುವ ಹಲ್ಲೆ ಪ್ರಕರಣದ ಬಗ್ಗೆ ವರದಿ ಸಲ್ಲಿಸಲು ಉಮಾಶ್ರಿ ಸೂಚನೆ ನೀಡಿದ್ದಾರೆ.

ವಿಕ ಸುದ್ದಿಲೋಕ 9 Jan 2017, 9:48 am

ಬೆಂಗಳೂರು: ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಅಫ್‌ ಇಂಡಿಯಾ ನವದೆಹಲಿಯಲ್ಲಿ ಏರ್ಪಡಿಸಿದ್ದ 17 ವರ್ಷದೊಳಗಿನ ಥ್ರೋಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡದ ಮಹಿಳಾ ಕ್ರೀಡಾಪಟುಗಳ ಮೇಲೆ ನಡೆದಿರುವ ಹಲ್ಲೆ ಪ್ರಕರಣದ ಬಗ್ಗೆ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಅವರು ದೆಹಲಿಯ ಸ್ಥಾನೀಯ ಆಯುಕ್ತೆ ಆರತಿ ಹಾಗೂ ಆತುಲ್‌ ಕುಮಾರ್‌ ತಿವಾರಿ ಅವರಿಗೆ ಸೂಚನೆ ನೀಡಿದ್ದಾರೆ.

ಸುದ್ದಿ ತಿಳಿದ ತಕ್ಷಣವೇ ದೆಹಲಿ ಪ್ರತಿನಿಧಿ ಅಪ್ಪಾಜಿ ನಾಡಗೌಡ ಹಾಗೂ ಸ್ಥಾನೀಯ ಆಯುಕ್ತರೊಂದಿಗೆ ಮಾತನಾಡಿ ಕ್ರೀಡಾಪಟುಗಳಿಗೆ ಅಗತ್ಯವಾದ ನೆರವು ನೀಡಬೇಕೆಂದು ಸೂಚನೆ ನೀಡಿದರು.

Vijaya Karnataka Web umashree asked report with athul kumar regaring attack on women athletes
ಮಹಿಳಾ ಕ್ರೀಡಾಪಟುಗಳ ಮೇಲೆ ಹಲ್ಲೆ ವರದಿ ಸಲ್ಲಿಕೆಗೆ ಸಚಿವೆ ಉಮಾಶ್ರೀ ಸೂಚನೆ


ಸಚಿವರ ಸೂಚನೆ ಮೇರೆಗೆ ಸ್ಥಾನೀಯ ಅಯುಕ್ತರ ಕಚೇರಿ ಅಧಿಕಾರಿಗಳು ಮತ್ತು ವಾರ್ತಾಧಿಕಾರಿಗಳು ಕ್ರೀಡಾಪಟುಗಳನ್ನು ಭೇಟಿಯಾಗಿ ಅಹವಾಲು ಆಲಿಸಿದರು. ಪಂದ್ಯದ ವೇಳೆ ಕೆಲವು ತೀರ್ಪುಗಳು ಪಕ್ಷಪಾತದಿಂದ ಕೂಡಿದ್ದವು ಎಂಬುದನ್ನು ಕರ್ನಾಟಕದ ಕ್ರೀಡಾಪಟುಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗೊಂದಲ ಉಂಟಾಗಿ ತಳ್ಳಾಟ, ನೂಕಾಟ ನಡೆದಿದೆ. ಯಾವುದೇ ಕ್ರೀಡಾಪಟುವಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂಬ ಮಾಹಿತಿಯನ್ನು ಸಚಿವರಿಗೆ ದೆಹಲಿ ಅಧಿಕಾರಿಗಳು ದೂರವಾಣಿ ಮೂಲಕ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌