ಆ್ಯಪ್ನಗರ

ಅ. 17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರಸಾದ್‌

ಸಂಪುಟ ಪುನಾರಚನೆ ಬಳಿಕ ಸಚಿವ ಸ್ಥಾನ ಕಳೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಸ್ಥಳೀಯ ಶಾಸಕ ವಿ.ಶ್ರೀನಿವಾಸ್‌ ಪ್ರಸಾದ್‌ ಅ. 17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.

ವಿಕ ಸುದ್ದಿಲೋಕ 13 Oct 2016, 4:08 am
ನಂಜನಗೂಡು: ಸಂಪುಟ ಪುನಾರಚನೆ ಬಳಿಕ ಸಚಿವ ಸ್ಥಾನ ಕಳೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಸ್ಥಳೀಯ ಶಾಸಕ ವಿ.ಶ್ರೀನಿವಾಸ್‌ ಪ್ರಸಾದ್‌ ಅ. 17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.
Vijaya Karnataka Web srinivasa prasad
ಅ. 17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರಸಾದ್‌


‘ಧಿ‘ರಾಜೀನಾಮೆ ನಿರ್ಧಾರ ಅಚಲ. ಈಗಾಗಲೇ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡರೊಂದಿಗೆ ಮಾತುಕತೆ ನಡೆಸಿ ರಾಜೀನಾಮೆ ನೀಡುವ ಸಂಬಂಧ ಸೋಮವಾರ ಭೇಟಿಗೆ ಸಮಯ ನಿಗದಿಗೊಳಿಸಲಾಗಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನಂತರ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಧಿಲಾಧಿಗುಧಿವುದು,’ಧಿ’ ಎಂದೂ ಸುದ್ದಿಗಾರರಿಗೆ ತಿಳಿಸಿದರು.

‘ಧಿ‘ಪಕ್ಷ ದಲ್ಲೇ ಇದ್ದು ಪಕ್ಷ ದ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಎಲ್ಲವನ್ನೂ ಈವರೆಗೆ ಸಹಿಸಿಕೊಂಡಿದ್ದೇನೆ. ನÜನ್ನ ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿ ಸಿದ್ದರಾಮಯ್ಯ ವಿಶ್ವಾಸ ದ್ರೋಹ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಬೇಕಾದ ಸಮಯ ಬಂದಿದೆ. ಮುಂದಿನ ರಾಜಕೀಯ ನಡೆ ಕುರಿತು ಸ್ಪಷ್ಟ ನಿರ್ಧಾರವನ್ನು ಈವರೆಗೂ ಕೈಗೊಂಡಿಲ್ಲ. ಯಾವುದೇ ಪಕ್ಷ ಕ್ಕೆ ಸೇರ್ಪಡೆಗೊಳ್ಳುವ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯನ್ನು ಮುಂದಿನ ದಿನಗಳಲ್ಲಿ ಬೆಂಬಲಿಗರು ಹಾಗೂ ಮತದಾರರ ಜತೆ ಸಮಾಲೋಚನೆ ನಡೆಸಿ ನಿರ್ಧಾರ ಪ್ರಕಟಿಸಧಿಲಾಧಿಗುಧಿವುಧಿದು,ಧಿ’’ ಎಧಿಂದು ತಿಳಿಸಿದರು.

‘ಧಿ‘ನನ್ನ 42 ವರ್ಷದ ಸುದೀರ್ಘ ರಾಜಕಾರಣದಲ್ಲಿ ಹಿಂದೆಂದೂ ಇಂತಹ ನೋವನ್ನು ಅನುಭವಿಸಿರಲಿಲ್ಲ, ಸುದೀರ್ಘ ಅವಧಿಯ ರಾಜಕಾರಣದ ನಂತರ ಗೌರವಯುತ ನಿರ್ಗಮನ ಬಯಸಿದ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ವೇಳೆ ಕನಿಷ್ಠ ನನ್ನನ್ನು ಸಂಪರ್ಕಿಸಿ ವಾಸ್ತವ ಸ್ಥಿತಿಗತಿ ಚರ್ಚಿಸಲೂ ಮುಂದಾಗದೆ ಏಕಾಏಕಿ ಸಂಪುಟದಿಂದ ಕೈಬಿಟ್ಟಿದ್ದು ಬೇಸರ ತಂದಿದೆ. ಪಕ್ಷ ದಲ್ಲಿ ನನಗೆ ಆಗಿರುವ ಅನ್ಯಾಯದ ಕುರಿತು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಆದರೆ ಕಾಂಗ್ರೆಸ್‌ ವರಿಷ್ಠರೂ ಸದ್ಯದ ಪರಿಸ್ಥಿತಿಯಲ್ಲಿ ಅಸಹಾಯಕರಾಗಿರುವಂತೆ ಕಂಡುಬಂದಿದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತದಾರರಿಗೆ ಮುಖ್ಯಮಂತ್ರಿ ನನ್ನ ಮೇಲೆ ನಡೆಸಿರುವ ಷಡ್ಯಂತ್ರವನ್ನು ತಿಳಿಸಲಿದ್ದೇನೆ,’’ ಎಂದು ಹೇಧಿಳಿಧಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ