ಆ್ಯಪ್ನಗರ

ಆರ್‌.ಆರ್‌. ನಗರ ಚುನಾವಣೆ ಬಳಿಕ ದಿಲ್ಲಿಗೆ: ಡಿಕೆಶಿ

ಆರ್.ಆರ್.ನಗರ ಕ್ಷೇತ್ರದ ಚುನಾವಣೆ ನಡೆದ ಮೇಲೆ ದೆಹಲಿಗೆ ತೆರಳುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌‌ ಹೇಳಿದ್ದಾರೆ.

Vijaya Karnataka Web 26 May 2018, 12:34 pm
ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಚುನಾವಣೆ ನಡೆದ ಮೇಲೆ ದಿಲ್ಲಿಗೆ ತೆರಳುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌‌ ಹೇಳಿದ್ದಾರೆ.
Vijaya Karnataka Web dk shivakumar


ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಡಿಕೆಶಿ, ರಾಜರಾಜೇಶ್ವರಿನಗರದ ಚುನಾವಣೆಯಿದೆ. ಹಲವು ಕಡೆ ಪ್ರಚಾರ ಕಾರ್ಯಕ್ರಮಕ್ಕೆ ಸಮಯ ನಿಗದಿಯಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿದೆ. ಜೆಡಿಎಸ್ ನಾಯಕರಿಗೆ ಮನವಿ ‌ಮಾಡಿದ್ದೆವು. ಆದರೆ ಅಭ್ಯರ್ಥಿಗಳನ್ನು ಹಾಕಿರುವುದರಿಂದ ಹಿಂದೆ ತೆಗೆಯುವುದು ಕಷ್ಟ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಇವತ್ತು ದೊಡ್ಡ ತ್ಯಾಗ ಮಾಡಿದೆ. ಇದನ್ನು ಗುರುತಿಸಿ ಕಾಂಗ್ರೆಸ್ ಅಭ್ಯರ್ಥಿಯ ಪರ ನಿಲ್ಲಬೇಕು ಎಂದು ಜೆಡಿಎಸ್ ನಾಯಕರು,ಕಾರ್ಯಕರ್ತರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ