ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಚುನಾವಣೆ ನಡೆದ ಮೇಲೆ ದಿಲ್ಲಿಗೆ ತೆರಳುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಡಿಕೆಶಿ, ರಾಜರಾಜೇಶ್ವರಿನಗರದ ಚುನಾವಣೆಯಿದೆ. ಹಲವು ಕಡೆ ಪ್ರಚಾರ ಕಾರ್ಯಕ್ರಮಕ್ಕೆ ಸಮಯ ನಿಗದಿಯಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿದೆ. ಜೆಡಿಎಸ್ ನಾಯಕರಿಗೆ ಮನವಿ ಮಾಡಿದ್ದೆವು. ಆದರೆ ಅಭ್ಯರ್ಥಿಗಳನ್ನು ಹಾಕಿರುವುದರಿಂದ ಹಿಂದೆ ತೆಗೆಯುವುದು ಕಷ್ಟ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಇವತ್ತು ದೊಡ್ಡ ತ್ಯಾಗ ಮಾಡಿದೆ. ಇದನ್ನು ಗುರುತಿಸಿ ಕಾಂಗ್ರೆಸ್ ಅಭ್ಯರ್ಥಿಯ ಪರ ನಿಲ್ಲಬೇಕು ಎಂದು ಜೆಡಿಎಸ್ ನಾಯಕರು,ಕಾರ್ಯಕರ್ತರಿಗೆ ಮನವಿ ಮಾಡುತ್ತಿದ್ದೇನೆ ಎಂದರು.
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಡಿಕೆಶಿ, ರಾಜರಾಜೇಶ್ವರಿನಗರದ ಚುನಾವಣೆಯಿದೆ. ಹಲವು ಕಡೆ ಪ್ರಚಾರ ಕಾರ್ಯಕ್ರಮಕ್ಕೆ ಸಮಯ ನಿಗದಿಯಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿದೆ. ಜೆಡಿಎಸ್ ನಾಯಕರಿಗೆ ಮನವಿ ಮಾಡಿದ್ದೆವು. ಆದರೆ ಅಭ್ಯರ್ಥಿಗಳನ್ನು ಹಾಕಿರುವುದರಿಂದ ಹಿಂದೆ ತೆಗೆಯುವುದು ಕಷ್ಟ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಇವತ್ತು ದೊಡ್ಡ ತ್ಯಾಗ ಮಾಡಿದೆ. ಇದನ್ನು ಗುರುತಿಸಿ ಕಾಂಗ್ರೆಸ್ ಅಭ್ಯರ್ಥಿಯ ಪರ ನಿಲ್ಲಬೇಕು ಎಂದು ಜೆಡಿಎಸ್ ನಾಯಕರು,ಕಾರ್ಯಕರ್ತರಿಗೆ ಮನವಿ ಮಾಡುತ್ತಿದ್ದೇನೆ ಎಂದರು.