ಆ್ಯಪ್ನಗರ

ರಾಷ್ಟ್ರೀಯ ಪಕ್ಷಗಳ ವಿರುದ್ಧ ದೇವೇಗೌಡ ಕಿಡಿ

ದೇಶದ ಎರಡೂ ರಾಷ್ಟ್ರೀಯ ಪಕ್ಷಗಳು ಶಾಂತಿ ಕದಡುತ್ತಿವೆ ಎಂದು ದೇವೇಗೌಡ ಆರೋಪಿಸಿದ್ದಾರೆ.

Vijaya Karnataka Web 5 Sep 2017, 4:51 pm
ದಾವಣಗೆರೆ: ಮಂಗಳೂರಿನಲ್ಲಿ ರ‍್ಯಾಲಿ ಮಾಡುವ ಮೂಲಕ ಬಿಜೆಪಿ ಯಾವ ಸಂದೇಶ ಕೊಡುತ್ತಿದೆ. ಮಂಗಳೂರಿನಲ್ಲಿ ಶಾಂತಿ ಕದಡುವ ಕೆಲಸವನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಮಾಡುತ್ತಿವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಆರೋಪಿಸಿದ್ದಾರೆ.
Vijaya Karnataka Web devegowda blasts cong bjp
ರಾಷ್ಟ್ರೀಯ ಪಕ್ಷಗಳ ವಿರುದ್ಧ ದೇವೇಗೌಡ ಕಿಡಿ


ದಾವಣಗೆರೆಯಲ್ಲಿ ಮಾತನಾಡಿದ ದೇವೇಗೌಡ, ಕೋಮು ವಿಷಯವನ್ನು ತೆಗೆದುಕೊಂಡು ರಾಜಕೀಯ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಅನೇಕ ಸಮಸ್ಯೆಗಳನ್ನು ಅವುಗಳ ಬಗ್ಗೆ ರಾಷ್ಟ್ರೀಯ ಪಕ್ಷಗಳು ತಲೆ ಕೆಡಿಸಿಕೊಳ್ಳಲಿ ಎಂದು ಆಗ್ರಹಿಸಿದರು.

ವಿಶ್ವದಲ್ಲಿ ಶಾಂತಿ ಕದಡಲು ಉತ್ತರ ಕೊರಿಯ ಇದೆ. ಇಲ್ಲಿ ರಾಷ್ಟ್ರೀಯ ಪಕ್ಷಗಳಿವೆ ಎಂದು ಗೌಡರು ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿದರು.

ನದಿ ಜೋಡಣೆ ವಿಚಾರದಲ್ಲಿ ಎಲ್ಲಾ ರಾಜ್ಯಗಳು ಒಮ್ಮತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಿ ಯವರು ಎಲ್ಲ ರಾಜ್ಯಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಸಾಮೂಹಿಕ ನಾಯಕತ್ವದಲ್ಲಿ ಸಂಘಟನೆ ಮಾಡುತ್ತೀವಿ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರಲಿದೆ ಎಂದು ಗೌಡರು ಹೇಳಿದರು.

ಕುಮಾರಸ್ವಾಮಿಯವರು ಇಸ್ರೇಲ್ ಗೆ ಹೋಗಿದ್ದು ಅಲ್ಲಿನ ನೀರಾವರಿ... ಕೃಷಿ ಬಗ್ಗೆ ಅಧ್ಯಯನ ಮಾಡಲು ,, ರಾಜ್ಯದ ಜನರ ಹಿತ ದೃಷ್ಟಿಗಾಗಿ ಇಸ್ರೇಲ್ಗೆ ಹೋಗಿದ್ದರು ,, ಅವರಿಗೆ ರಾಜ್ಯದ ಜನರ ಬಗ್ಗೆ ಇರುವ ಕಾಳಜಿ ನೋಡಿ ನಾನು ಕುಮಾರಸ್ವಾಮಿ ಬಗ್ಗೆ ಹೆಮ್ಮೆ ಪಡುತ್ತೀನಿ ಎಂದು ದೇವೇಗೌಡ ತಿಳಿಸಿದರು.

Devegowda blasts Cong, BJP
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ