ಆ್ಯಪ್ನಗರ

ಕೈ ನಾಯಕ ಆನಂದ್ ಸಿಂಗ್‌ಗೆ ಐಟಿ ಶಾಕ್

ಹೊಸಪೇಟೆ ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್( ಬಾದಾಮಿ) ಮೇಲೆ ಸೋಮವಾರ ರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Vijaya Karnataka Web 8 May 2018, 10:39 am
ಬಾಗಲಕೋಟೆ: ಹೊಸಪೇಟೆ ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್( ಬಾದಾಮಿ) ಮೇಲೆ ಸೋಮವಾರ ರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Vijaya Karnataka Web IT


ರೆಸಾರ್ಟ್ ಆಗಮಿಸಿದ ಅಧಿಕಾರಿಗಳ ತಂಡ ಸಿಬ್ಬಂದಿ ಯಿಂದ ಲೆಕ್ಕಪತ್ರ ಮಾಹಿತಿ ಕಲೆ ಹಾಕಿತು.

ದಾಳಿ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ರೆಸಾರ್ಟ್‌ನಲ್ಲಿದ್ದರು. ಬಾದಾಮಿ ಕಾಂಗ್ರೆಸ್ ಅಭ್ಯರ್ಥಿ ಯಾಗಿರುವ ಸಿಎಂ ಸಿದ್ದರಾಮಯ್ಯ ಇದೇ ರೆಸಾರ್ಟ್‌ನಲ್ಲಿಯೇ ತಂಗುತ್ತಾರೆ. ಕಾಂಗ್ರೆಸ್ ನ ಬಹುತೇಕ ಮುಖಂಡರು ಈ ರೆಸಾರ್ಟ್‌ನಲ್ಲಿಯೇ ಚುನಾವಣೆ ರಣತಂತ್ರ ರೂಪಿಸುತ್ತಾರೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ.

ಅರೆಸೇನಾ ಪಡೆ ಹಾಗೂ ಪೊಲೀಸರು ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ