ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ನಗರದಲ್ಲಿರುವ ಆದಿಚುಂಚನಗಿರಿ ಶಾಖಾಮಠಕ್ಕೆ ತೆರಳಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಶುಕ್ರವಾರ ಸಂಜೆ ನಗರಕ್ಕೆ ಮರಳುತ್ತಿದ್ದಾರೆ. ಶುಕ್ರವಾರ ರಾತ್ರಿ ವಿಮಾನ ನಿಲ್ದಾಣದಿಂದ ಅದ್ದೂರಿ ಸ್ವಾಗತದೊಂದಿಗೆ ಬಿಜೆಪಿ ಕಚೇರಿಗೆ ಕರೆತಂದು ಅಭಿನಂದಿಸಲು ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಒಕ್ಕಲಿಗ ಸಮಾಜದ ಹಿರಿಯ ಮುಖಂಡ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಉಪಚುನಾವಣೆ ಹೊತ್ತಿನಲ್ಲಿ ವ್ಯತಿರಿಕ್ತ ಸಂದೇಶ ರವಾನಿಸುವುದನ್ನು ತಡೆಯುವ ದಿಸೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಆದರೆ, ಇದೊಂದು ಸೌಜನ್ಯದ ಭೇಟಿ ಎಂದು ಸಿಎಂ ಆಪ್ತ ಮೂಲಗಳು ಹೇಳಿವೆ.