ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಹಾಗೂ ಆ ಪಕ್ಷದ ಬಂಡಾಯ ಅಭ್ಯರ್ಥಿ ಬೆಂಬಲಿಗರು ಚುನಾವಣಾ ಪ್ರಚಾರ ವೇಳೆ ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು, ಒಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ.
ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಚಿಕ್ಕಬೈರತಿಯಲ್ಲಿ ಶನಿವಾರ ರಾತ್ರಿ ನಲ್ಲೂರಹಳ್ಳಿ ಟಿ.ನಾಗೇಶ್ ಪರ ಪ್ರಚಾರಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗರು, ವಿದ್ಯುತ್ ಕಡಿತ ಮಾಡಿದರು. ಈ ವೇಳೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಮಾರುತೇಶ್ ಅಲಿಯಾಸ್ ರಾಜು ಎಂಬಾತನಿಗೆ ಚಾಕುವಿನಿಂದ ಚುಚ್ಚಲಾಗಿದೆ. ಅಭ್ಯರ್ಥಿಯ ಸಹೋದರ ಚಲಪತಿಗೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ರಾಜುನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಚಿಕ್ಕಬೈರತಿಯಲ್ಲಿ ಶನಿವಾರ ರಾತ್ರಿ ನಲ್ಲೂರಹಳ್ಳಿ ಟಿ.ನಾಗೇಶ್ ಪರ ಪ್ರಚಾರಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗರು, ವಿದ್ಯುತ್ ಕಡಿತ ಮಾಡಿದರು. ಈ ವೇಳೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಮಾರುತೇಶ್ ಅಲಿಯಾಸ್ ರಾಜು ಎಂಬಾತನಿಗೆ ಚಾಕುವಿನಿಂದ ಚುಚ್ಚಲಾಗಿದೆ. ಅಭ್ಯರ್ಥಿಯ ಸಹೋದರ ಚಲಪತಿಗೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ರಾಜುನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.