Please enable javascript.Karnataka Chunavane,ಚುನಾವಣೆ ಪ್ರಚಾರ ವೇಳೆ ಚಾಕು ಇರಿತ - knife attack while campaigning for election - Vijay Karnataka

ಚುನಾವಣೆ ಪ್ರಚಾರ ವೇಳೆ ಚಾಕು ಇರಿತ

Vijaya Karnataka 7 May 2018, 8:14 am
Subscribe

ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಆ ಪಕ್ಷದ ಬಂಡಾಯ ಅಭ್ಯರ್ಥಿ ಬೆಂಬಲಿಗರು ಚುನಾವಣಾ ಪ್ರಚಾರ ವೇಳೆ ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು, ಒಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ.

knife-attack
ಬೆಂಗಳೂರು: ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಆ ಪಕ್ಷದ ಬಂಡಾಯ ಅಭ್ಯರ್ಥಿ ಬೆಂಬಲಿಗರು ಚುನಾವಣಾ ಪ್ರಚಾರ ವೇಳೆ ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು, ಒಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ.

ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಚಿಕ್ಕಬೈರತಿಯಲ್ಲಿ ಶನಿವಾರ ರಾತ್ರಿ ನಲ್ಲೂರಹಳ್ಳಿ ಟಿ.ನಾಗೇಶ್‌ ಪರ ಪ್ರಚಾರಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಗರು, ವಿದ್ಯುತ್‌ ಕಡಿತ ಮಾಡಿದರು. ಈ ವೇಳೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಮಾರುತೇಶ್‌ ಅಲಿಯಾಸ್‌ ರಾಜು ಎಂಬಾತನಿಗೆ ಚಾಕುವಿನಿಂದ ಚುಚ್ಚಲಾಗಿದೆ. ಅಭ್ಯರ್ಥಿಯ ಸಹೋದರ ಚಲಪತಿಗೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ರಾಜುನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ