ಆ್ಯಪ್ನಗರ

ಭಾರತಕ್ಕೆ ಫೆಬ್ರವರಿ ತಿಂಗಳಿನಲ್ಲಿ ಬರಲಿವೆ 12 ಚಿರತೆಗಳು…!

ನಮೀಬಿಯಾದಿಂದ ಭಾರತಕ್ಕೆ ಕಳೆದ ವರ್ಷ ಚೀತಾಗಳನ್ನು ಕರೆತರಲಾಯಿತು. ಹಾಗೆಯೇ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚಿರತೆಗಳು ಭಾರತಕ್ಕೆ ಬರಲಿವೆ.

Authored by ಸೌಮ್ಯ ಟೇಮ್ಕರ್ | Vijaya Karnataka Web 4 Feb 2023, 2:31 pm
PC: Unsplash
Vijaya Karnataka Web cheetahs
cheetahs


ನರೇಂದ್ರ ಮೋದಿ ಸರ್ಕಾರವು ದೇಶದ ಅಭಿವೃದ್ಧಿಯ ಕಾರ್ಯದ ಜೊತೆ ಜೊತೆಗೆ ವನ್ಯಮೃಗಗಳ ಬಗ್ಗೆ ಕೂಡ ಹೆಚ್ಚು ಗಮನಹರಿಸುತ್ತಿದೆ. ಇದರಿಂದ ನಮ್ಮ ದೇಶವು ಮತ್ತಷ್ಟು ಶ್ರೀಮಂತ ವನ್ಯಜೀವಿಗಳನ್ನು ಹೊಂದುವ ಅದ್ಭುತವಾದ ದೇಶವಾಗಲಿದೆ. ಕಳೆದ ವರ್ಷ ನಮಿಬೀಯಾದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಯಿತು. ಅದೇ ರೀತಿ ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ 12 ಚಿರತೆಗಳನ್ನು ಭಾರತಕ್ಕೆ ಕರೆತರಲು ಸಜ್ಜಾಗಿದೆ.

ದಕ್ಷಿಣ ಆಫ್ರಿಕಾ ಮತ್ತು ಭಾರತವು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಅದರ ಪ್ರಕಾರ, ಮುಂದಿನ 8 ರಿಂದ 10 ವರ್ಷಗಳವರೆಗೆ ವಾರ್ಷಿಕವಾಗಿ ಒಂದು ಡಜನ್‌, ಅಂದರೆ 12 ಚಿರತೆಗಳನ್ನು ಭಾರತಕ್ಕೆ ಕರೆತರಲಾಗುವುದು. ಈ ಚಿರತೆಗಳ ಒಪ್ಪಂದದಿಂದ ವನ್ಯಮೃಗಗಳ ಸಂತತಿಯು ಹೆಚ್ಚಾಗಲಿದೆ.

ಮೂಲಗಳ ಪ್ರಕಾರ, ಈ ವರ್ಷ ಫೆಬ್ರವರಿ ತಿಂಗಳಿನಲ್ಲಿ 12 ಚಿರತೆಗಳನ್ನು ಭಾರತಕ್ಕೆ ಸ್ಥಳಾಂತರಿಸಲಾಗುತ್ತದೆ. ಚಿರತೆಗಳು ಭಾರತೀಯ ಜೀವವೈವಿಧ್ಯಕ್ಕೆ ಸಂಪೂರ್ಣವಾಗಿ ಹೊಸ ಪ್ರಭೇದವಲ್ಲ ಎಂಬುದನ್ನು ನೆನಪಿನಲ್ಲಿಡುವುದು ಅತ್ಯಗತ್ಯ.

ವಾಸ್ತವವಾಗಿ, ಯಾವುದೇ ದೇಶದ ವನ್ಯಜೀವಿಗಳು ಹವಾಮಾನಕ್ಕೆ ಹೊಂದಿಕೊಳ್ಳುವುದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ವರದಿಗಳ ಪ್ರಕಾರ, ಕಳೆದ ವರ್ಷ ಸ್ಥಳಾಂತರಗೊಂಡ ಚೀತಾಗಳು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದ ಪರಿಸರಕ್ಕೆ ಹೊಂದಿಕೊಳ್ಳುವ ಪ್ರಕ್ರಿಯೆಯಲ್ಲಿವೆ.

ಇದನ್ನೂ ಓದಿ: ಗೋವಾ ಸರ್ಕಾರ: ಇನ್ಮೇಲೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತಿಲ್ಲ…!

ಇನ್ನು ಭಾರತಕ್ಕೆ ಕರೆತರಲಾಗುವ ಚೀತಾಗಳನ್ನು ‘ಪ್ರಾಜೆಕ್ಟ್‌ ಚೀತಾ’ದ ಒಂದು ಭಾಗವಾಗಿದೆ. ಚಿರತೆಗಳನ್ನು ಮತ್ತೊಮ್ಮೆ ಭಾರತೀಯ ಜೀವವೈವಿಧ್ಯದ ಒಂದು ಭಾಗವಾಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.

ಒಪ್ಪಂದದ ಪ್ರಕಾರ, 5 ವರ್ಷಗಳಲ್ಲಿ ಭಾರತಕ್ಕೆ 50 ಚಿರತೆಗಳನ್ನು ಸ್ಥಳಾಂತರಿಸುವ ಗುರಿಯನ್ನು ಹೊಂದಿದೆ. ಅಷ್ಟೇ ಅಲ್ಲ, ಈ 50 ಚಿರತೆಗಳು ಭಾರತದ ವಿವಿಧ ರಾಷ್ಟ್ರೀಯ ಉದ್ಯಾನವನಗಳಲ್ಲಿ ಇರಲಿವೆ.

ಇದನ್ನೂ ಓದಿ: ಬಜೆಟ್ 2023 ರ ಪರಿಣಾಮ ಇನ್ನುಮುಂದೆ ಅಂತಾರಾಷ್ಟ್ರೀಯ ಪ್ರವಾಸ ಪ್ಯಾಕೇಜ್‌ ದುಬಾರಿ

ಲೇಖನವನ್ನು ಇಂಗ್ಲೀಷ್‌ನಲ್ಲಿ ಓದಲು
ಇಲ್ಲಿ ಕ್ಲಿಕ್‌ ಮಾಡಿ.
ಲೇಖಕರ ಬಗ್ಗೆ
ಸೌಮ್ಯ ಟೇಮ್ಕರ್
ಸೌಮ್ಯ ಟೇಮ್ಕರ್ ಅವರು ತಮ್ಮ ಉದ್ಯಮದಲ್ಲಿ 4 ವರ್ಷಗಳ ಅನುಭವ ಹೊಂದಿರುವ ಮಾಧ್ಯಮ ವೃತ್ತಿಪರರಾಗಿದ್ದಾರೆ. ಪ್ರಯಾಣಕ್ಕೆ ಸಂಬಂಧಿಸಿದ ಲೇಖನವನ್ನು ಅಚ್ಚುಕಟ್ಟಾಗಿ ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದಾರೆ. ಸೌಮ್ಯಾ ಕಥೆಗಳನ್ನು ಹೇಳುವ ಹಾಗು ಪ್ರಯಾಣದ ಅನುಭವವನ್ನು ತಮ್ಮ ಲೇಖನದ ಮೂಲಕ ಹಂಚಿಕೊಳ್ಳಲು ಹೆಚ್ಚು ಇಷ್ಟ ಪಡುತ್ತಾರೆ. ತನ್ನ ವೃತ್ತಿಜೀವನದ ಅವಧಿಯಲ್ಲಿ, ಪ್ರಪಂಚದ ಅನೇಕ ಸ್ಥಳಗಳ ಬಗ್ಗೆ ರಸವತ್ತಾದ ಲೇಖನಗಳನ್ನು ಓದುಗರಿಗಾಗಿ ಬರೆಯುತ್ತಾ ಬಂದಿದ್ದಾರೆ. ಪ್ರವಾಸದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಸೌಮ್ಯ, ಪ್ರಯಾಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಟಿಪ್ಸ್‌ಗಳನ್ನು ಕೂಡ ಹಂಚಿಕೊಳ್ಳುತ್ತಾರೆ. ವಾಸ್ತವವಾಗಿ, ಆಕೆಯ ಬರವಣಿಗೆಯ ಶೈಲಿಯು ಸ್ಪಷ್ಟ ಮತ್ತು ನಿಖರತೆಯನ್ನು ಹೊಂದಿರುತ್ತದೆ. ಓದುಗರನ್ನು ತನ್ನ ಬರವಣಿಗೆಯಿಂದ ಸೆಳೆಯುವ ವಿಶಿಷ್ಟ ಸಾಮರ್ಥ್ಯ ಆಕೆಯಲ್ಲಿದೆ. ಪ್ರಯಾಣದ ಉತ್ಸಾಹಿಗಳಿಗೆ ಅವಳ ಲೇಖನಗಳನ್ನು ಓದಲೇಬೇಕು ಎನ್ನುವ ಭಾವ ಉಂಟಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸೌಮ್ಯಾ ಕೇವಲ ಪ್ರವಾಸಗಳಲ್ಲಿ ಮಾತ್ರ ಅತ್ಯಾಸಕ್ತಿ ಹೊಂದಿರುವ ವ್ಯಕ್ತಿಯಲ್ಲ, ಬದಲಾಗಿ ಕಾದಂಬರಿಗಳನ್ನು ಓದುವುದನ್ನು ಆನಂದಿಸುತ್ತಾಳೆ. ಜೊತೆಗೆ ಪ್ರತಿನಿತ್ಯ ನಡೆಯುವ ರಾಜಕೀಯ ಸುದ್ದಿಗಳ ಮಾಹಿತಿಗಳನ್ನು ಸಂಗ್ರಹಿಸುತ್ತಾಳೆ. ಒಟ್ಟಾರೆ ಸೌಮ್ಯಾ ಜೀವನದ ಬಗ್ಗೆ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿರುವ ಸುಸಂಬದ್ಧ ವ್ಯಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ